AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ

ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 01, 2021 | 9:57 AM

Share

ಕೊರೊನಾ ವೈರಸ್​ ಹುಟ್ಟಿ, ಹರಡಲು ಶುರುವಾಗಿ ಒಂದು ವರ್ಷದ ಮೇಲಾಗಿದೆ. ಇದೀಗ ಯುಎಸ್​, ಯುಕೆ ಸೇರಿ ಹಲವು ರಾಷ್ಟ್ರಗಳು ವೈರಸ್ ಮೂಲ ಕಂಡುಹಿಡಿಯಲು ಮುಂದಾಗಿದ್ದು, ಆ ಗುಂಪಿಗೆ ಇದೀಗ ಭಾರತವೂ ಸೇರ್ಪಡೆಯಾಗಿದೆ. ಕೊರೊನಾ ಚೀನಾದಲ್ಲಿ ಶುರುವಾಗಿದೆ ಎಂದು ಹೇಳಲಾಗಿದ್ದರೂ ಅದರ ಮೂಲ ಯಾವುದು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ಹಿಂದೆ ಡಬ್ಲ್ಯೂಎಚ್​ಒ ತಜ್ಞರ ತಂಡ ಚೀನಾಕ್ಕೆ ಭೇಟಿ ನೀಡಿತ್ತಾದರೂ ಸರಿಯಾದ ಉತ್ತರವನ್ನೇನೂ ಕೊಟ್ಟಿರಲಿಲ್ಲ. ಬಾವಲಿ ಅಥವಾ ಬೇರೆ ಪ್ರಾಣಿಯಿಂದ ಮನುಷ್ಯನಿಗೆ ಹರಡಿರಬಹುದು ಎಂದು ವರದಿ ನೀಡಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಅವರು ಕೊರೊನಾ ಮೂಲ ಕಂಡುಹಿಡಿಯಲು ತಮ್ಮ ಗುಪ್ತಚರ ಸಂಸ್ಥೆ ಸಿಐಎ ಗೆ ಆದೇಶ ನೀಡಿದ್ದಾರೆ. ಇನ್ನು ಯುಕೆ ಕೂಡ ಕೊರೊನಾ ಸೋಂಕಿನ ಮೂಲ ಕಂಡುಹಿಡಿಯಲು ಮುಂದಾಗಿದೆ. ಕೊರೊನಾ ಸೋಂಕು ಚೀನಾದ ಪ್ರಯೋಗಲಾಯದಿಂದ ಸೋರಿಕೆಯಾಗಿದೆ ಎಂಬ ಈ ಹಿಂದಿನ ಮಾಹಿತಿಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹಾಗಾಗಿ ಇದರ ಮೂಲ ತಿಳಿಯಲೇಬೇಕಾದ ಅವಶ್ಯಕತೆ ಇದೆ ಎಂದೂ ಹೇಳಿದೆ.

ಇನ್ನು ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ. ಇನ್ನು ಚೀನಾ ಮಾತ್ರ ಕೊರೊನಾ ಮೂಲ ಯಾವುದು ಎಂಬ ಬಗ್ಗೆ ಸರಿಯಾಗಿ ಏನೂ ಹೇಳುತ್ತಿಲ್ಲ. ಅಲ್ಲದೆ ತಮ್ಮಲ್ಲಿನ ಸಾವಿನ ಸಂಖ್ಯೆಯಲ್ಲೂ ಮುಚ್ಚುಮರೆ ಮಾಡುತ್ತಿದೆ ಎಂಬುದನ್ನು ಯುಎಸ್​ನ ಹಿಂದಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಪಿಸಿದ್ದರು. ಕೊರೊನಾ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆಗಳನ್ನು ಹೆಚ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧಾನೋಮ್​ ಅವರು ಈ ವರ್ಷ ಅಂತಾರಾಷ್ಟ್ರೀಯ ಒಪ್ಪಂದಕ್ಕಾಗಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​