AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ

ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 01, 2021 | 9:57 AM

Share

ಕೊರೊನಾ ವೈರಸ್​ ಹುಟ್ಟಿ, ಹರಡಲು ಶುರುವಾಗಿ ಒಂದು ವರ್ಷದ ಮೇಲಾಗಿದೆ. ಇದೀಗ ಯುಎಸ್​, ಯುಕೆ ಸೇರಿ ಹಲವು ರಾಷ್ಟ್ರಗಳು ವೈರಸ್ ಮೂಲ ಕಂಡುಹಿಡಿಯಲು ಮುಂದಾಗಿದ್ದು, ಆ ಗುಂಪಿಗೆ ಇದೀಗ ಭಾರತವೂ ಸೇರ್ಪಡೆಯಾಗಿದೆ. ಕೊರೊನಾ ಚೀನಾದಲ್ಲಿ ಶುರುವಾಗಿದೆ ಎಂದು ಹೇಳಲಾಗಿದ್ದರೂ ಅದರ ಮೂಲ ಯಾವುದು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ಹಿಂದೆ ಡಬ್ಲ್ಯೂಎಚ್​ಒ ತಜ್ಞರ ತಂಡ ಚೀನಾಕ್ಕೆ ಭೇಟಿ ನೀಡಿತ್ತಾದರೂ ಸರಿಯಾದ ಉತ್ತರವನ್ನೇನೂ ಕೊಟ್ಟಿರಲಿಲ್ಲ. ಬಾವಲಿ ಅಥವಾ ಬೇರೆ ಪ್ರಾಣಿಯಿಂದ ಮನುಷ್ಯನಿಗೆ ಹರಡಿರಬಹುದು ಎಂದು ವರದಿ ನೀಡಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಅವರು ಕೊರೊನಾ ಮೂಲ ಕಂಡುಹಿಡಿಯಲು ತಮ್ಮ ಗುಪ್ತಚರ ಸಂಸ್ಥೆ ಸಿಐಎ ಗೆ ಆದೇಶ ನೀಡಿದ್ದಾರೆ. ಇನ್ನು ಯುಕೆ ಕೂಡ ಕೊರೊನಾ ಸೋಂಕಿನ ಮೂಲ ಕಂಡುಹಿಡಿಯಲು ಮುಂದಾಗಿದೆ. ಕೊರೊನಾ ಸೋಂಕು ಚೀನಾದ ಪ್ರಯೋಗಲಾಯದಿಂದ ಸೋರಿಕೆಯಾಗಿದೆ ಎಂಬ ಈ ಹಿಂದಿನ ಮಾಹಿತಿಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹಾಗಾಗಿ ಇದರ ಮೂಲ ತಿಳಿಯಲೇಬೇಕಾದ ಅವಶ್ಯಕತೆ ಇದೆ ಎಂದೂ ಹೇಳಿದೆ.

ಇನ್ನು ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ. ಇನ್ನು ಚೀನಾ ಮಾತ್ರ ಕೊರೊನಾ ಮೂಲ ಯಾವುದು ಎಂಬ ಬಗ್ಗೆ ಸರಿಯಾಗಿ ಏನೂ ಹೇಳುತ್ತಿಲ್ಲ. ಅಲ್ಲದೆ ತಮ್ಮಲ್ಲಿನ ಸಾವಿನ ಸಂಖ್ಯೆಯಲ್ಲೂ ಮುಚ್ಚುಮರೆ ಮಾಡುತ್ತಿದೆ ಎಂಬುದನ್ನು ಯುಎಸ್​ನ ಹಿಂದಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಪಿಸಿದ್ದರು. ಕೊರೊನಾ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆಗಳನ್ನು ಹೆಚ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧಾನೋಮ್​ ಅವರು ಈ ವರ್ಷ ಅಂತಾರಾಷ್ಟ್ರೀಯ ಒಪ್ಪಂದಕ್ಕಾಗಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್