AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ

ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 01, 2021 | 9:57 AM

Share

ಕೊರೊನಾ ವೈರಸ್​ ಹುಟ್ಟಿ, ಹರಡಲು ಶುರುವಾಗಿ ಒಂದು ವರ್ಷದ ಮೇಲಾಗಿದೆ. ಇದೀಗ ಯುಎಸ್​, ಯುಕೆ ಸೇರಿ ಹಲವು ರಾಷ್ಟ್ರಗಳು ವೈರಸ್ ಮೂಲ ಕಂಡುಹಿಡಿಯಲು ಮುಂದಾಗಿದ್ದು, ಆ ಗುಂಪಿಗೆ ಇದೀಗ ಭಾರತವೂ ಸೇರ್ಪಡೆಯಾಗಿದೆ. ಕೊರೊನಾ ಚೀನಾದಲ್ಲಿ ಶುರುವಾಗಿದೆ ಎಂದು ಹೇಳಲಾಗಿದ್ದರೂ ಅದರ ಮೂಲ ಯಾವುದು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ಹಿಂದೆ ಡಬ್ಲ್ಯೂಎಚ್​ಒ ತಜ್ಞರ ತಂಡ ಚೀನಾಕ್ಕೆ ಭೇಟಿ ನೀಡಿತ್ತಾದರೂ ಸರಿಯಾದ ಉತ್ತರವನ್ನೇನೂ ಕೊಟ್ಟಿರಲಿಲ್ಲ. ಬಾವಲಿ ಅಥವಾ ಬೇರೆ ಪ್ರಾಣಿಯಿಂದ ಮನುಷ್ಯನಿಗೆ ಹರಡಿರಬಹುದು ಎಂದು ವರದಿ ನೀಡಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಅವರು ಕೊರೊನಾ ಮೂಲ ಕಂಡುಹಿಡಿಯಲು ತಮ್ಮ ಗುಪ್ತಚರ ಸಂಸ್ಥೆ ಸಿಐಎ ಗೆ ಆದೇಶ ನೀಡಿದ್ದಾರೆ. ಇನ್ನು ಯುಕೆ ಕೂಡ ಕೊರೊನಾ ಸೋಂಕಿನ ಮೂಲ ಕಂಡುಹಿಡಿಯಲು ಮುಂದಾಗಿದೆ. ಕೊರೊನಾ ಸೋಂಕು ಚೀನಾದ ಪ್ರಯೋಗಲಾಯದಿಂದ ಸೋರಿಕೆಯಾಗಿದೆ ಎಂಬ ಈ ಹಿಂದಿನ ಮಾಹಿತಿಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹಾಗಾಗಿ ಇದರ ಮೂಲ ತಿಳಿಯಲೇಬೇಕಾದ ಅವಶ್ಯಕತೆ ಇದೆ ಎಂದೂ ಹೇಳಿದೆ.

ಇನ್ನು ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ. ಇನ್ನು ಚೀನಾ ಮಾತ್ರ ಕೊರೊನಾ ಮೂಲ ಯಾವುದು ಎಂಬ ಬಗ್ಗೆ ಸರಿಯಾಗಿ ಏನೂ ಹೇಳುತ್ತಿಲ್ಲ. ಅಲ್ಲದೆ ತಮ್ಮಲ್ಲಿನ ಸಾವಿನ ಸಂಖ್ಯೆಯಲ್ಲೂ ಮುಚ್ಚುಮರೆ ಮಾಡುತ್ತಿದೆ ಎಂಬುದನ್ನು ಯುಎಸ್​ನ ಹಿಂದಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಪಿಸಿದ್ದರು. ಕೊರೊನಾ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆಗಳನ್ನು ಹೆಚ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧಾನೋಮ್​ ಅವರು ಈ ವರ್ಷ ಅಂತಾರಾಷ್ಟ್ರೀಯ ಒಪ್ಪಂದಕ್ಕಾಗಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್