AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ

ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ.

ಕೊರೊನಾ ವೈರಾಣುವಿನ ಮೂಲ ಕಂಡುಹಿಡಿಯಲು ಹಲವು ರಾಷ್ಟ್ರಗಳ ಕಸರತ್ತು; ಇದೀಗ ಆ ಗುಂಪಿಗೆ ಭಾರತವೂ ಸೇರ್ಪಡೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Jun 01, 2021 | 9:57 AM

ಕೊರೊನಾ ವೈರಸ್​ ಹುಟ್ಟಿ, ಹರಡಲು ಶುರುವಾಗಿ ಒಂದು ವರ್ಷದ ಮೇಲಾಗಿದೆ. ಇದೀಗ ಯುಎಸ್​, ಯುಕೆ ಸೇರಿ ಹಲವು ರಾಷ್ಟ್ರಗಳು ವೈರಸ್ ಮೂಲ ಕಂಡುಹಿಡಿಯಲು ಮುಂದಾಗಿದ್ದು, ಆ ಗುಂಪಿಗೆ ಇದೀಗ ಭಾರತವೂ ಸೇರ್ಪಡೆಯಾಗಿದೆ. ಕೊರೊನಾ ಚೀನಾದಲ್ಲಿ ಶುರುವಾಗಿದೆ ಎಂದು ಹೇಳಲಾಗಿದ್ದರೂ ಅದರ ಮೂಲ ಯಾವುದು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ಹಿಂದೆ ಡಬ್ಲ್ಯೂಎಚ್​ಒ ತಜ್ಞರ ತಂಡ ಚೀನಾಕ್ಕೆ ಭೇಟಿ ನೀಡಿತ್ತಾದರೂ ಸರಿಯಾದ ಉತ್ತರವನ್ನೇನೂ ಕೊಟ್ಟಿರಲಿಲ್ಲ. ಬಾವಲಿ ಅಥವಾ ಬೇರೆ ಪ್ರಾಣಿಯಿಂದ ಮನುಷ್ಯನಿಗೆ ಹರಡಿರಬಹುದು ಎಂದು ವರದಿ ನೀಡಿತ್ತು.

ಇದೀಗ ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಅವರು ಕೊರೊನಾ ಮೂಲ ಕಂಡುಹಿಡಿಯಲು ತಮ್ಮ ಗುಪ್ತಚರ ಸಂಸ್ಥೆ ಸಿಐಎ ಗೆ ಆದೇಶ ನೀಡಿದ್ದಾರೆ. ಇನ್ನು ಯುಕೆ ಕೂಡ ಕೊರೊನಾ ಸೋಂಕಿನ ಮೂಲ ಕಂಡುಹಿಡಿಯಲು ಮುಂದಾಗಿದೆ. ಕೊರೊನಾ ಸೋಂಕು ಚೀನಾದ ಪ್ರಯೋಗಲಾಯದಿಂದ ಸೋರಿಕೆಯಾಗಿದೆ ಎಂಬ ಈ ಹಿಂದಿನ ಮಾಹಿತಿಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ನಮ್ಮ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹಾಗಾಗಿ ಇದರ ಮೂಲ ತಿಳಿಯಲೇಬೇಕಾದ ಅವಶ್ಯಕತೆ ಇದೆ ಎಂದೂ ಹೇಳಿದೆ.

ಇನ್ನು ಕೊರೊನಾ ವೈರಸ್​ ಸೋಂಕಿನ ಮೂಲವನ್ನು ಕಂಡುಹಿಡಿಯಲು ಡಬ್ಲ್ಯೂಎಚ್​ಒಗೆ ನಾವು ಯಾವಾಗಲೂ ಬೆಂಬಲಿಸುತ್ತೇವೆ. ಈ ವಿಚಾರದಲ್ಲಿ ಪಾರದರ್ಶಕತೆ ತುಂಬ ಮುಖ್ಯ ಎಂದು ಭಾರತ ಮೊದಲಿನಿಂದಲೂ ಹೇಳಿಕೊಂಡು ಬಂದಿದೆ. ಇನ್ನು ಚೀನಾ ಮಾತ್ರ ಕೊರೊನಾ ಮೂಲ ಯಾವುದು ಎಂಬ ಬಗ್ಗೆ ಸರಿಯಾಗಿ ಏನೂ ಹೇಳುತ್ತಿಲ್ಲ. ಅಲ್ಲದೆ ತಮ್ಮಲ್ಲಿನ ಸಾವಿನ ಸಂಖ್ಯೆಯಲ್ಲೂ ಮುಚ್ಚುಮರೆ ಮಾಡುತ್ತಿದೆ ಎಂಬುದನ್ನು ಯುಎಸ್​ನ ಹಿಂದಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಆರೋಪಿಸಿದ್ದರು. ಕೊರೊನಾ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆಗಳನ್ನು ಹೆಚ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧಾನೋಮ್​ ಅವರು ಈ ವರ್ಷ ಅಂತಾರಾಷ್ಟ್ರೀಯ ಒಪ್ಪಂದಕ್ಕಾಗಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ