AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಎಸ್‌ಸಿಒ ಆಯೋಜಿತ ಭಯೋತ್ಪಾದನಾ ವಿರೋಧಿ ಚಟುವಟಿಕೆಗಳಿಗಾಗಿ ಭಾರತ 3 ಸದಸ್ಯರ ತಂಡ ಕಳುಹಿಸಲಿದೆ: ವರದಿ

ಇರಾನ್ ಕೂಡ ಭಾರತ, ಚೀನಾ, ಪಾಕಿಸ್ತಾನ ಮತ್ತು 4 ಮಧ್ಯ ಏಷ್ಯಾದ ದೇಶಗಳನ್ನು ಒಳಗೊಂಡ ಗುಂಪಿನಲ್ಲಿ ಸೇರಿಕೊಂಡಿರುವುದರಿಂದ ಅಫ್ಘಾನಿಸ್ತಾನದ ಪರಿಸ್ಥಿತಿಗೆ ರಾಜಕೀಯ ಮತ್ತು ರಾಜತಾಂತ್ರಿಕ ಪರಿಹಾರದ ಪ್ರಯತ್ನಗಳಲ್ಲಿ ಎಸ್‌ಸಿಒ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.

ಪಾಕಿಸ್ತಾನದಲ್ಲಿ ಎಸ್‌ಸಿಒ ಆಯೋಜಿತ ಭಯೋತ್ಪಾದನಾ ವಿರೋಧಿ ಚಟುವಟಿಕೆಗಳಿಗಾಗಿ ಭಾರತ 3 ಸದಸ್ಯರ ತಂಡ ಕಳುಹಿಸಲಿದೆ: ವರದಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 30, 2021 | 11:32 AM

Share

ದೆಹಲಿ: ಪಾಕಿಸ್ತಾನದಲ್ಲಿ ಮುಂದಿನ ವಾರ ಶಾಂಘೈ ಸಹಕಾರ ಸಂಘಟನೆ (SCO) ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಲು ಭಾರತವು 3 ಸದಸ್ಯರ ತಂಡವನ್ನು ಕಳುಹಿಸುವ ಸಾಧ್ಯತೆಯಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಪಬ್ಬಿ ಭಯೋತ್ಪಾದನಾ ವಿರೋಧಿ ಚಟುವಟಿಕೆ 2021 ಪಾಕಿಸ್ತಾನದ ನೌಶೇರಾ ಜಿಲ್ಲೆಯ ಪಬ್ಬಿಯಲ್ಲಿ ಅಕ್ಟೋಬರ್ 3 ರಿಂದ ಪ್ರಾದೇಶಿಕ ಭಯೋತ್ಪಾದನಾ ವಿರೋಧಿ ರಚನೆ (RATS) ಅಡಿಯಲ್ಲಿ ಎಸ್‌ಸಿಒ ಸದಸ್ಯ ರಾಜ್ಯಗಳ ನಡುವೆ ಭಯೋತ್ಪಾದನಾ ನಿಗ್ರಹ ಸಹಕಾರವನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದೆ. ಭಾರತದ ಉಪಸ್ಥಿತಿಯು ಭದ್ರತೆ-ಸಂಬಂಧಿತ ವಿಷಯಗಳಲ್ಲಿ, ವಿಶೇಷವಾಗಿ ಅಫ್ಘಾನಿಸ್ತಾನದಲ್ಲಿ ಮಧ್ಯ ಏಷ್ಯಾ ಕೇಂದ್ರಿತ ಪ್ರಾದೇಶಿಕ ಬಣದ ಪಾತ್ರಕ್ಕೆ ಹೊಂದುವ ಪ್ರಾಮುಖ್ಯತೆಯ ಸಂಕೇತವಾಗಿ ಕಂಡುಬರುತ್ತದೆ. ಇರಾನ್ ಕೂಡ ಭಾರತ, ಚೀನಾ, ಪಾಕಿಸ್ತಾನ ಮತ್ತು 4 ಮಧ್ಯ ಏಷ್ಯಾದ ದೇಶಗಳನ್ನು ಒಳಗೊಂಡ ಗುಂಪಿನಲ್ಲಿ ಸೇರಿಕೊಂಡಿರುವುದರಿಂದ ಅಫ್ಘಾನಿಸ್ತಾನದ ಪರಿಸ್ಥಿತಿಗೆ ರಾಜಕೀಯ ಮತ್ತು ರಾಜತಾಂತ್ರಿಕ ಪರಿಹಾರದ ಪ್ರಯತ್ನಗಳಲ್ಲಿ ಎಸ್‌ಸಿಒ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ.

ತಾಷ್ಕೆಂಟ್‌ನಲ್ಲಿನ ಆರ್​​ಎಟಿಎಸ್ ಕೌನ್ಸಿಲ್ ಸಭೆಯ ನಂತರ ಈ ವರ್ಷ ಮಾರ್ಚ್‌ನಲ್ಲಿ ಘೋಷಿಸಿದ ಪ್ರಕ್ರಿಯೆಗಳಲ್ಲಿ ಭಾರತವು ತನ್ನ ಭಾಗವಹಿಸುವಿಕೆಯನ್ನು ಖಚಿತ ಪಡಿಸಿದ ಕೊನೆಯ ದೇಶ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಬಹಿರಂಗಪಡಿಸಿದೆ. ಎಸ್‌ಸಿಒ ಪ್ರೋಟೋಕಾಲ್‌ಗೆ ಅನುಗುಣವಾಗಿ, ಪಾಕಿಸ್ತಾನವು ಶಾಂಘೈ ಸಹಕಾರ ಸಂಸ್ಥೆಯನ್ನು ಆಹ್ವಾನಿಸಿತ್ತು.

ಈ ತಿಂಗಳ ಆರಂಭದಲ್ಲಿ ಎಸ್‌ಸಿಒ ದುಶಾಂಬೆ ಘೋಷಣೆಯು ಪ್ರಾದೇಶಿಕ ಭದ್ರತೆಯನ್ನು ಖಾತರಿಪಡಿಸುವ ಸಲುವಾಗಿ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದದ ವಿರುದ್ಧ ಜಂಟಿ ಹೋರಾಟದಲ್ಲಿ ಎಸ್‌ಸಿಒ ಆರ್ ಎಟಿಎಸ್ “ವಿಶೇಷ ಪಾತ್ರ” ವನ್ನು ಪುನರುಚ್ಚರಿಸಿತು. ಮುಂಬರುವ ಪಬ್ಬಿ ಭಯೋತ್ಪಾದನಾ ವಿರೋಧಿ 2021 ಪ್ರಕ್ರಿಯೆ ಸೇರಿದಂತೆ ಸದಸ್ಯ ರಾಷ್ಟ್ರಗಳು ಜಂಟಿ ಭಯೋತ್ಪಾದನಾ ವಿರೋಧಿ ಪ್ರಕ್ರಿಯೆಯನ್ನು ಮುಂದುವರಿಸುತ್ತವೆ ಎಂದು ಅದು ಹೇಳಿದೆ.

ಅಫ್ಘಾನಿಸ್ತಾನ ಬಗ್ಗೆ ದುಶಾಂಬೆಯಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತಾಲಿಬಾನ್ ರಚಿಸಿದ ಸರ್ಕಾರವು ಅಂತರ್ಗತವಾಗಿಲ್ಲ ಮತ್ತು ಅದನ್ನು ಗುರುತಿಸಲು ಅವಸರ ಮಾಡಬೇಡಿ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ವಿನಂತಿಸಿದ್ದರು.

ಇದನ್ನೂ ಓದಿ: ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​

ಇದನ್ನೂ ಓದಿ:ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ಒಂದು ವರ್ಷ; 35 ಕೃಷಿ ತಳಿ ಸೇರಿ ಮೋದಿ ಸರ್ಕಾರ ರೈತರಿಗೆ ಕೊಟ್ಟ ಕೊಡುಗೆಗಳೇನು? ಇಲ್ಲಿದೆ ಒಂದು ಅವಲೋಕನ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ