AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಸೋಂಕಿನ ಕೇಸ್​ಗಳು ನಿನ್ನೆಗಿಂತ ಇಂದು ಕಡಿಮೆ, ಪಾಸಿಟಿವಿಟಿ ರೇಟ್​ನಲ್ಲೂ ಇಳಿಕೆ; 24ಗಂಟೆಯಲ್ಲಿ 385 ಮಂದಿ ಸಾವು

ಒಂದೆಡೆ ಕೊವಿಡ್​ 19 ಕೇಸ್​ನಲ್ಲಿ ಇಳಿಕೆಯಾಗಿದ್ದರೆ, ಇನ್ನೊಂದೆಡೆ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಹೆಚ್ಚಿದೆ. ಭಾನುವಾರ 7743 ಇದ್ದ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಇಂದು 8209ಕ್ಕೆ ಏರಿದೆ. ಇದರಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದು, 1738 ಮಂದಿ ಒಮಿಕ್ರಾನ್ ಸೋಂಕಿತರು ಇದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿನ ಕೇಸ್​ಗಳು ನಿನ್ನೆಗಿಂತ ಇಂದು ಕಡಿಮೆ, ಪಾಸಿಟಿವಿಟಿ ರೇಟ್​ನಲ್ಲೂ ಇಳಿಕೆ; 24ಗಂಟೆಯಲ್ಲಿ 385 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jan 17, 2022 | 11:06 AM

Share

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,58,098 ಹೊಸ ಕೊವಿಡ್ 19 ಕೇಸ್​ಗಳು ದಾಖಲಾಗಿವೆ. ಹಾಗೇ, 385 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.19.65 ಮತ್ತು ವಾರದ ಪಾಸಿಟಿವಿಟಿ ದರ ಶೇ.14.41ರಷ್ಟಿದೆ. ಇನ್ನು ಒಂದು ದಿನದಲ್ಲಿ 1,51,740 ಮಂದಿ ಚೇತರಿಸಿಕೊಂಡಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದೆ. ಒಟ್ಟಾರೆ ಕೊರೊನಾದಿಂದ ಚೇತರಿಕೆ ಕಂಡವರ ಸಂಖ್ಯೆ 3,52,37,461 ಆಗಿದ್ದು, ಚೇತರಿಕೆ ದರ ಶೇ.94.27 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆದರೆ ದೇಶದಲ್ಲಿ ನಿನ್ನೆಗಿಂತ ಇಂದು 13,113 ಕೇಸ್​ಗಳು ಕಡಿಮೆ ದಾಖಲಾಗಿದ್ದು ಸ್ವಲ್ಪಮಟ್ಟಿಗೆ ಸಮಾಧಾನ ತಂದಿದೆ. 

ಇನ್ನೊಂದೆಡೆ ಮೂರು ಹಂತದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ನಡೆಯುತ್ತಿದೆ. ಕಳೆದವರ್ಷ ಜನವರಿ 16ರಿಂದ ವಯಸ್ಕರಿಗೆ ಕೊವಿಡ್​ 19 ಲಸಿಕೆ ನೀಡುತ್ತಿದ್ದು, ಇದುವರೆಗೆ ಸುಮಾರು 157.20 ಕೋಟಿ ಡೋಸ್​​ ನೀಡಲಾಗಿದೆ. 15-18ವರ್ಷದವರಿಗೆ ಈಗಾಗಲೇ 3 ಕೋಟಿ ಡೋಸ್ ನೀಡಿಕೆಯಾಗಿದೆ. ಹಾಗೇ, 24ಗಂಟೆಯಲ್ಲಿ 13,13,444 ಜನರಿಗೆ ಕೊವಿಡ್ 19 ತಪಾಸಣೆ ಮಾಡಲಾಗಿದ್ದು, ಒಟ್ಟಾರೆ ಇದುವರೆಗೆ ಟೆಸ್ಟ್ ಮಾಡಿದ್ದು  70.37 ಕೋಟಿ ಜನರಿಗೆ. ಭಾರತದ ಆರ್​ ವ್ಯಾಲ್ಯೂ (ಅಂದರೆ, ಕೊವಿಡ್ 19 ಎಷ್ಟರ ಮಟ್ಟಿಗೆ ಕ್ಷಿಪ್ರವಾಗಿ ಹರಡುತ್ತಿದೆ ಎಂಬುದನ್ನು ತೋರಿಸುವ ಮೌಲ್ಯಮಾಪನ) 2.2ಕ್ಕೆ ಇಳಿದಿದೆ ಎಂದು ಐಐಟಿ ಮದ್ರಾಸ್​ ಹೇಳಿದೆ.

ಒಂದೆಡೆ ಕೊವಿಡ್​ 19 ಕೇಸ್​ನಲ್ಲಿ ಇಳಿಕೆಯಾಗಿದ್ದರೆ, ಇನ್ನೊಂದೆಡೆ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಹೆಚ್ಚಿದೆ. ಭಾನುವಾರ 7743 ಇದ್ದ ಒಮಿಕ್ರಾನ್​ ಸೋಂಕಿತರ ಸಂಖ್ಯೆ ಇಂದು 8209ಕ್ಕೆ ಏರಿದೆ. ಇದರಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದು, 1738 ಮಂದಿ ಒಮಿಕ್ರಾನ್ ಸೋಂಕಿತರು ಇದ್ದಾರೆ. ಹಾಗೇ ಎರಡನೇ ಸ್ಥಾನದಲ್ಲಿರುವ ಪಶ್ಚಿಮ ಬಂಗಾಳದಲ್ಲಿ 1672 ಮತ್ತು ಮೂರನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ 1276 ಸೋಂಕಿತರು ಇದ್ದಾರೆ. ಅದು ಬಿಟ್ಟರೆ ದೆಹಲಿ, ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ 500 ಗಡಿ ದಾಟಿದೆ.

ಭಾರತದಲ್ಲಿ 8 ಲಸಿಕೆಗಳಿಗೆ ಅನುಮತಿ ಹೆಚ್ಚುತ್ತಿರುವ ಕೊವಿಡ್ 19 ಸೋಂಕಿನ ವಿರುದ್ಧ ಹೋರಾಡಲು ಲಸಿಕೆಗಳೇ ಅಸ್ತ್ರ ಎಂಬ ಮಂತ್ರವನ್ನು ಇದೀಗ ಜಗತ್ತು ನಂಬಿದೆ. ಭಾರತದಲ್ಲಿ ಒಟ್ಟು 8 ಕೊವಿಡ್​ 19 ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ. ಅದರಲ್ಲಿ ಪ್ರಮುಖವಾಗಿ ಸೀರಮ್ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​, ಭಾರತ್​ ಬಯೋಟೆಕ್​ನ ಕೊವ್ಯಾಕ್ಸಿನ್​, ರಷ್ಯಾದ ಸ್ಪುಟ್ನಿಕ್​ ವಿ, ಅಮೆರಿಕದ ಮಾಡೆರ್ನಾ, ಜಾನ್ಸನ್​ ಆ್ಯಂಡ್ ಜಾನ್ಸನ್​, ಜೈಡೆಸ್​ ಕ್ಯಾಡಿಲಾದ ZyCoV-D, ಸೀರಮ್​ ಇನ್​ಸ್ಟಿಟ್ಯೂಟ್​ನ ಕೊವ್ಯಾವ್ಯಾಕ್ಸ್ ಮತ್ತು ಬಯಾಲಜಿಕಲ್​ ಇ ಸಂಸ್ಥೆಯ ಕಾರ್ಬೆವ್ಯಾಕ್ಸ್​ಗಳ ಬಳಕೆಗೆ ದೇಶದಲ್ಲಿ ಅನುಮತಿಸಲಾಗಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ನೀಡಲಾಗುತ್ತಿರುವ ಲಸಿಕೆಗಳು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಆಗಿದೆ.

ಇನ್ನೊಂದೆಡೆ ಅನೇಕ ರಾಜ್ಯಗಳಲ್ಲಿ ಕೊವಿಡ್ 19 ನಿಯಂತ್ರಣ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಶಾಲಾ-ಕಾಲೇಜುಗಳು, ಮನರಂಜನಾ ಸ್ಥಳಗಳೆಲ್ಲ ಬಂದ್ ಆಗಿವೆ. ಇನ್ನುಳಿದಂತೆ ಬಸ್​, ಮೆಟ್ರೋಗಳನ್ನೆಲ್ಲ ಶೇ.50ರ ಸಾಮರ್ಥ್ಯದ ನಿಯಮದಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನೈಟ್​ಕರ್ಫ್ಯೂ, ವೀಕೆಂಡ್ ಕರ್ಫ್ಯೂಗಳನ್ನೂ ಹೇರಲಾಗಿದೆ. ಆದರೂ ಕೂಡ ಕೊವಿಡ್​ 19 ಸೋಂಕು ತೀವ್ರವಾಗಿ ಹರಡುತ್ತಿದ್ದು, ಇದು ಮೂರನೇ ಅಲೆಯ ಪ್ರಾರಂಭ ಎಂದು ಆರೋಗ್ಯತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಳ್ಳಲು ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್‌ಗೆ ಕೇಂದ್ರ

Published On - 11:05 am, Mon, 17 January 22

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,