Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ

ಭಾರತದಲ್ಲಿ ಕಳೆದ 2ವರ್ಷಗಳಿಂದ ಮಲೇರಿಯಾ ವಿರುದ್ಧ ನಿರಂತರ ಹೋರಾಟ ನಡೆಯುತ್ತಿರುವ ಪರಿಣಾಮ ವಾರ್ಷಿಕ ಮಲೇರಿಯಾ ಪ್ರಕರಣದಲ್ಲಿ ಶೇ.18 ಮತ್ತು ಸಾವಿನ ಪ್ರಮಾಣದಲ್ಲಿ ಶೇ. 20ರಷ್ಟು ಕಡಿಮೆಯಾಗಿದೆ.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ
ಸಾಂದರ್ಭಿಕ ಚಿತ್ರ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 01, 2020 | 1:04 PM

ವಿಶ್ವಸಂಸ್ಥೆ: ಮಲೇರಿಯಾ ವಿರುದ್ಧದ ಹೋರಾಟದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಆಗ್ನೇಯ ಏಷ್ಯಾದಲ್ಲಿ 2000ನೇ ಇಸವಿಯಲ್ಲಿ 20 ಕೋಟಿ ಮಲೇರಿಯಾ ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷ ಅದು 5.6 ದಶಲಕ್ಷಕ್ಕೆ ಇಳಿದಿದ್ದು ದಾಖಲೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್​ಒ) ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆಯು ಸೋಮವಾರ ವಿಶ್ವ ಮಲೇರಿಯಾ ವರದಿ-2020 ಬಿಡುಗಡೆ ಮಾಡಿದೆ. ಜಾಗತಿಕವಾಗಿ 22.9 ಕೋಟಿ ಮಲೇರಿಯಾ ಕೇಸ್​ಗಳು ದಾಖಲಾಗಿದೆ. ಈ ವಾರ್ಷಿಕ ವರದಿಯ ಅಂದಾಜು ಕಳೆದ ನಾಲ್ಕು ವರ್ಷಗಳಿಂದಲೂ ಹೆಚ್ಚೇನೂ ಬದಲಾಗುತ್ತಿಲ್ಲ. ಕಳೆದ ವರ್ಷ ಒಟ್ಟಾರೆ 40,900 ಜನರು ಮಲೇರಿಯಾದಿಂದ ಪ್ರಾಣ ಕಳೆದುಕೊಂಡಿದ್ದರು. ಹಾಗೇ 2018ರಲ್ಲಿ 4,11,000 ಜನ ಈ ರೋಗಕ್ಕೆ ಬಲಿಯಾಗಿದ್ದರು. ಆದರೆ ಆಗ್ನೇಯ ಏಷ್ಯಾದ ದೇಶಗಳು ಮಲೇರಿಯಾ ವಿರುದ್ಧ ಪ್ರಬಲವಾಗಿ ಹೋರಾಡುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಸಾವಿನ ಪ್ರಮಾಣ ಇಳಿಮುಖ ಈ ದೇಶಗಳಲ್ಲಿ ಮಲೇರಿಯಾ ಪ್ರಕರಣ ಶೇ.73ರಷ್ಟಿದೆ ಮತ್ತು ಸಾವಿನ ಪ್ರಮಾಣ ಶೇ.74ಕ್ಕೆ ಇಳಿದಿದೆ. ಅದರಲ್ಲೂ ಭಾರತದಲ್ಲಿ ರೋಗದ ಪ್ರಮಾಣ ತೀವ್ರ ಕಡಿಮೆಯಾಗಿದೆ. 2000ರಲ್ಲಿ 29,500ಮಂದಿ ಮಲೇರಿಯಾದಿಂದ ಸಾವನ್ನಪ್ಪಿದ್ದರು, 2019ರಲ್ಲಿ 7700 ಜನ ಸಾವನ್ನಪ್ಪಿದ್ದಾರೆ. ಅಂದಿಗೆ ಹೋಲಿಸಿದರೆ ಈ ಪ್ರಮಾಣ ತುಂಬ ಕಡಿಮೆ ಎಂದು ಡಬ್ಲ್ಯೂಎಚ್​ಒ ಡೈರೆಕ್ಟರ್ ಜನರಲ್​ ಡಾ. ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಭಾರತದಲ್ಲಿ ಕಳೆದ 2 ವರ್ಷಗಳಿಂದ ಮಲೇರಿಯಾ ವಿರುದ್ಧ ನಿರಂತರ ಹೋರಾಟ ನಡೆಯುತ್ತಿರುವ ಪರಿಣಾಮ ವಾರ್ಷಿಕ ಮಲೇರಿಯಾ ಪ್ರಕರಣದಲ್ಲಿ ಶೇ.18 ಮತ್ತು ಸಾವಿನ ಪ್ರಮಾಣದಲ್ಲಿ ಶೇ. 20ರಷ್ಟು ಕಡಿಮೆಯಾಗಿದೆ. 2019ರಲ್ಲಿ ಭಾರತದಲ್ಲಿ ಶೇ.88 ಮಲೇರಿಯಾ ಪ್ರಕರಣಗಳು ಹಾಗೂ ಶೇ.86 ಸಾವಿನ ಪ್ರಕರಣಗಳು ವರದಿಯಾಗಿದೆ ಎಂದು ಡಬ್ಲ್ಯೂಎಚ್​ಒ ವಿವರಿಸಿದೆ.

ಬುರ್ಕಿನಾ ಫಾಸೊ, ಕ್ಯಾಮರೂನ್, ಕಾಂಗೋ, ಘಾನಾ, ಭಾರತ, ಮಾಲಿ, ಮೊಜಾಂಬಿಕ್, ನಿಜರ್, ನೈಜೀರಿಯಾ, ಉಗಾಂಡಾ ಮತ್ತು ತಾಂಜೇನಿಯಾದಲ್ಲಿ ಹೆಚ್ಚು ಮಲೇರಿಯಾ ಪ್ರಕರಣ ಕಾಣಿಸಿಕೊಳ್ಳುತ್ತಿವೆ. ಜಾಗತಿಕ ಮಲೇರಿಯಾ ವರದಿಯಲ್ಲಿ ಶೇ.71ರಷ್ಟು ಪಾಲು ಈ ದೇಶಗಳದ್ದೇ ಆಗಿವೆ. ಆದರೆ ಭಾರತದಲ್ಲಿ ರೋಗದ ಪ್ರಮಾಣ ಕಡಿಮೆಯಾಗುತ್ತಿರುವುದು ಆಶಾದಾಯಕ ಎಂದು ವರದಿ ಹೇಳಿದೆ.

ಇನ್ನಷ್ಟು..

ಕೊರೊನಾ ಮೂಲ ಚೀನಾ ಅಲ್ಲ ಎಂಬ ವಾದವನ್ನು ಒಪ್ಪುವುದು ಕಷ್ಟ ಕಷ್ಟ ಎಂದ WHO! ಸೊಳ್ಳೆಗಳನ್ನು ಮನೆಯಿಂದ ಹೊರ ಓಡಿಸಲು ಕರ್ಪೂರ ಬಹಳ ಪರಿಣಾಕಾರಿ

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ