AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್​ ಯುದ್ಧ ವಿಚಾರದಲ್ಲಿ ತಟಸ್ಥ ನಿಲುವು ಮುಂದುವರಿಸಿದ ಭಾರತ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯಕ್ಕೆ ಕೇವಲ 2 ಮತ !

ನಿರ್ಣಯಕ್ಕೆ ಒಟ್ಟು 15 ರಾಷ್ಟ್ರಗಳ ಸಮ್ಮತಿ ಕೋರಿತ್ತು. ನಿರ್ಣಯ ಅಂಗೀಕಾರವಾಗಲು ರಷ್ಯಾಕ್ಕೆ 9 ಮತಗಳಾದರೂ ಬೇಕಿತ್ತು. ಆದರೆ 13 ರಾಷ್ಟ್ರಗಳು ದೂರವೇ ಉಳಿದವು. ಎರಡು ಮತಗಳು ಬಿದ್ದವು. 

ರಷ್ಯಾ-ಉಕ್ರೇನ್​ ಯುದ್ಧ ವಿಚಾರದಲ್ಲಿ ತಟಸ್ಥ ನಿಲುವು ಮುಂದುವರಿಸಿದ ಭಾರತ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯಕ್ಕೆ ಕೇವಲ 2 ಮತ !
ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ
TV9 Web
| Edited By: |

Updated on:Mar 24, 2022 | 10:39 AM

Share

ರಷ್ಯಾ ಮತ್ತು ಉಕ್ರೇನ್​ ಮಧ್ಯದ ಯುದ್ಧದ (Russia-Ukraine War)ವಿಚಾರದಲ್ಲಿ ಭಾರತ ತನ್ನ ತಟಸ್ಥ ನಿಲುವನ್ನು ಮುಂದುವರಿಸಿದೆ. ಉಕ್ರೇನ್​​ನಲ್ಲಿ ಮಾನವೀಯ ಬಿಕ್ಕಟ್ಟು ಪರಿಸ್ಥಿತಿಗೆ ಸಂಬಂಧಪಟ್ಟಂತೆ ರಷ್ಯಾ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯಕ್ಕೆ ಮತದಾನ ಮಾಡುವುದರಿಂದ ಭಾರತ ದೂರ ಉಳಿದಿದೆ. ಈ ನಿರ್ಣಯದ ಪರ ಕೇವಲ 2 ಮತಗಳು ಬಿದ್ದಿದ್ದು, ಭಾರತ ಸೇರಿ ಒಟ್ಟು 13 ರಾಷ್ಟ್ರಗಳು ಮತ ಹಾಕಲಿಲ್ಲ. ಆ ಎರಡು ಮತಗಳಲ್ಲಿ ಒಂದು ರಷ್ಯಾದ್ದು ಮತ್ತೊಂದು ಚೀನಾದ್ದು. ಹೀಗಾಗಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯ ತಿರಸ್ಕೃತಗೊಂಡಿದೆ.

ವಿಶ್ವ ಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶಾಶ್ವತ ಮತ್ತು ವಿಟೋ ವೆಲ್ಡಿಂಗ್​ ಕೌನ್ಸಿಲ್​ ಸದಸ್ಯತ್ವ ಹೊಂದಿರುವ ರಷ್ಯಾ, ಉಕ್ರೇನ್​​ನಲ್ಲಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಕರಡು ನಿರ್ಣಯ ಮಂಡಿಸಿತ್ತು. ಉಕ್ರೇನ್​​ನಲ್ಲಿ ಮಹಿಳೆಯರು ಮತ್ತು ಮಕ್ಕಳು, ದುರ್ಬಲರು ಸೇರಿ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರ ರಕ್ಷಣೆ ಮಾಡಲಾಗಿದೆ. ಅಲ್ಲಿನ ನಾಗರಿಕರ ಕ್ಷಿಪ್ರ, ಸುರಕ್ಷಿತ ಸ್ಥಳಾಂತರ ಮಾಡಲು ಸ್ವಯಂಪ್ರೇರಿತವಾಗಿಯೇ ಕದನ ವಿರಾಮ ಘೋಷಿಸಲಾಗುತ್ತಿದೆ.  ಈ ಮೂಲಕ ಮಾನವೀಯ ಕಾರಿಡಾರ್​ ರಚನೆಗಾಗಿ ರಷ್ಯಾ ಕ್ರಮಕೈಗೊಂಡಿದ್ದನ್ನು ಒಪ್ಪಿಕೊಳ್ಳಬೇಕು ಎಂದು ನಿರ್ಣಯದಲ್ಲಿ ಉಲ್ಲೇಖಿಸಿ, ಅದಕ್ಕೆ ಒಟ್ಟು 15 ರಾಷ್ಟ್ರಗಳ ಸಮ್ಮತಿ ಕೋರಿತ್ತು. ನಿರ್ಣಯ ಅಂಗೀಕಾರವಾಗಲು ರಷ್ಯಾಕ್ಕೆ 9 ಮತಗಳಾದರೂ ಬೇಕಿತ್ತು. ಆದರೆ 13 ರಾಷ್ಟ್ರಗಳು ದೂರವೇ ಉಳಿದವು. ಎರಡು ಮತಗಳು ಬಿದ್ದವು.

ರಷ್ಯಾ-ಉಕ್ರೇನ್ ಯುದ್ಧ ಶುರುವಾದಾಗಿನಿಂದಲೂ ಭಾರತ ಯಾವ ರಾಷ್ಟ್ರದ ಪರ-ವಿರೋಧವಾಗಿ ನಿಲ್ಲುತ್ತಿಲ್ಲ. ಬದಲಿಗೆ ಶಾಂತಿ ಜಪ ಪಠಿಸುತ್ತಿದೆ. ಈ ಹಿಂದೆ ಉಕ್ರೇನ್​​ ಮೇಲಿನ ರಷ್ಯಾದ ಆಕ್ರಮಣ ಖಂಡಿಸಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ತುರ್ತು ವಿಶೇಷ ಅಧಿವೇಶನ ನಡೆಸಲು ವಿಶ್ವ ಸಂಸ್ಥೆ ಭದ್ರತಾ ಮಂಡಳಿ ನಿರ್ಣಯ ಕೈಗೊಂಡಿತ್ತು.  ಆಗಲೂ ಸಹ ಭಾರತ ಮತದಾನದಿಂದ ದೂರವೇ ಇತ್ತು.

ಇದನ್ನೂ ಓದಿ: ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್; ಏಪ್ರಿಲ್​ನಿಂದ ದುಬಾರಿಯಾಗಲಿವೆಯೇ ಹಲವು ಸೇವೆಗಳು? ಇಲ್ಲಿದೆ ಪೂರ್ಣ ವಿವರ

Published On - 8:33 am, Thu, 24 March 22

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ