AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್​ ಯುದ್ಧ ವಿಚಾರದಲ್ಲಿ ತಟಸ್ಥ ನಿಲುವು ಮುಂದುವರಿಸಿದ ಭಾರತ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯಕ್ಕೆ ಕೇವಲ 2 ಮತ !

ನಿರ್ಣಯಕ್ಕೆ ಒಟ್ಟು 15 ರಾಷ್ಟ್ರಗಳ ಸಮ್ಮತಿ ಕೋರಿತ್ತು. ನಿರ್ಣಯ ಅಂಗೀಕಾರವಾಗಲು ರಷ್ಯಾಕ್ಕೆ 9 ಮತಗಳಾದರೂ ಬೇಕಿತ್ತು. ಆದರೆ 13 ರಾಷ್ಟ್ರಗಳು ದೂರವೇ ಉಳಿದವು. ಎರಡು ಮತಗಳು ಬಿದ್ದವು. 

ರಷ್ಯಾ-ಉಕ್ರೇನ್​ ಯುದ್ಧ ವಿಚಾರದಲ್ಲಿ ತಟಸ್ಥ ನಿಲುವು ಮುಂದುವರಿಸಿದ ಭಾರತ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯಕ್ಕೆ ಕೇವಲ 2 ಮತ !
ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ
TV9 Web
| Updated By: Lakshmi Hegde|

Updated on:Mar 24, 2022 | 10:39 AM

Share

ರಷ್ಯಾ ಮತ್ತು ಉಕ್ರೇನ್​ ಮಧ್ಯದ ಯುದ್ಧದ (Russia-Ukraine War)ವಿಚಾರದಲ್ಲಿ ಭಾರತ ತನ್ನ ತಟಸ್ಥ ನಿಲುವನ್ನು ಮುಂದುವರಿಸಿದೆ. ಉಕ್ರೇನ್​​ನಲ್ಲಿ ಮಾನವೀಯ ಬಿಕ್ಕಟ್ಟು ಪರಿಸ್ಥಿತಿಗೆ ಸಂಬಂಧಪಟ್ಟಂತೆ ರಷ್ಯಾ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯಕ್ಕೆ ಮತದಾನ ಮಾಡುವುದರಿಂದ ಭಾರತ ದೂರ ಉಳಿದಿದೆ. ಈ ನಿರ್ಣಯದ ಪರ ಕೇವಲ 2 ಮತಗಳು ಬಿದ್ದಿದ್ದು, ಭಾರತ ಸೇರಿ ಒಟ್ಟು 13 ರಾಷ್ಟ್ರಗಳು ಮತ ಹಾಕಲಿಲ್ಲ. ಆ ಎರಡು ಮತಗಳಲ್ಲಿ ಒಂದು ರಷ್ಯಾದ್ದು ಮತ್ತೊಂದು ಚೀನಾದ್ದು. ಹೀಗಾಗಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾದ ನಿರ್ಣಯ ತಿರಸ್ಕೃತಗೊಂಡಿದೆ.

ವಿಶ್ವ ಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶಾಶ್ವತ ಮತ್ತು ವಿಟೋ ವೆಲ್ಡಿಂಗ್​ ಕೌನ್ಸಿಲ್​ ಸದಸ್ಯತ್ವ ಹೊಂದಿರುವ ರಷ್ಯಾ, ಉಕ್ರೇನ್​​ನಲ್ಲಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಕರಡು ನಿರ್ಣಯ ಮಂಡಿಸಿತ್ತು. ಉಕ್ರೇನ್​​ನಲ್ಲಿ ಮಹಿಳೆಯರು ಮತ್ತು ಮಕ್ಕಳು, ದುರ್ಬಲರು ಸೇರಿ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರ ರಕ್ಷಣೆ ಮಾಡಲಾಗಿದೆ. ಅಲ್ಲಿನ ನಾಗರಿಕರ ಕ್ಷಿಪ್ರ, ಸುರಕ್ಷಿತ ಸ್ಥಳಾಂತರ ಮಾಡಲು ಸ್ವಯಂಪ್ರೇರಿತವಾಗಿಯೇ ಕದನ ವಿರಾಮ ಘೋಷಿಸಲಾಗುತ್ತಿದೆ.  ಈ ಮೂಲಕ ಮಾನವೀಯ ಕಾರಿಡಾರ್​ ರಚನೆಗಾಗಿ ರಷ್ಯಾ ಕ್ರಮಕೈಗೊಂಡಿದ್ದನ್ನು ಒಪ್ಪಿಕೊಳ್ಳಬೇಕು ಎಂದು ನಿರ್ಣಯದಲ್ಲಿ ಉಲ್ಲೇಖಿಸಿ, ಅದಕ್ಕೆ ಒಟ್ಟು 15 ರಾಷ್ಟ್ರಗಳ ಸಮ್ಮತಿ ಕೋರಿತ್ತು. ನಿರ್ಣಯ ಅಂಗೀಕಾರವಾಗಲು ರಷ್ಯಾಕ್ಕೆ 9 ಮತಗಳಾದರೂ ಬೇಕಿತ್ತು. ಆದರೆ 13 ರಾಷ್ಟ್ರಗಳು ದೂರವೇ ಉಳಿದವು. ಎರಡು ಮತಗಳು ಬಿದ್ದವು.

ರಷ್ಯಾ-ಉಕ್ರೇನ್ ಯುದ್ಧ ಶುರುವಾದಾಗಿನಿಂದಲೂ ಭಾರತ ಯಾವ ರಾಷ್ಟ್ರದ ಪರ-ವಿರೋಧವಾಗಿ ನಿಲ್ಲುತ್ತಿಲ್ಲ. ಬದಲಿಗೆ ಶಾಂತಿ ಜಪ ಪಠಿಸುತ್ತಿದೆ. ಈ ಹಿಂದೆ ಉಕ್ರೇನ್​​ ಮೇಲಿನ ರಷ್ಯಾದ ಆಕ್ರಮಣ ಖಂಡಿಸಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ತುರ್ತು ವಿಶೇಷ ಅಧಿವೇಶನ ನಡೆಸಲು ವಿಶ್ವ ಸಂಸ್ಥೆ ಭದ್ರತಾ ಮಂಡಳಿ ನಿರ್ಣಯ ಕೈಗೊಂಡಿತ್ತು.  ಆಗಲೂ ಸಹ ಭಾರತ ಮತದಾನದಿಂದ ದೂರವೇ ಇತ್ತು.

ಇದನ್ನೂ ಓದಿ: ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್; ಏಪ್ರಿಲ್​ನಿಂದ ದುಬಾರಿಯಾಗಲಿವೆಯೇ ಹಲವು ಸೇವೆಗಳು? ಇಲ್ಲಿದೆ ಪೂರ್ಣ ವಿವರ

Published On - 8:33 am, Thu, 24 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?