AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ

ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ
ಚೀನಾದಲ್ಲಿ ಕೊವಿಡ್
TV9 Web
| Edited By: |

Updated on: Jan 02, 2023 | 10:51 AM

Share

ನವದೆಹಲಿ: ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಜನವರಿ 1ರಿಂದ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು (RT-PCR Test) ಕಡ್ಡಾಯಗೊಳಿಸಲಾಗಿದೆ. ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ (Air Suvidha Portal) ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು. ಭಾರತಕ್ಕೆ ಪ್ರಯಾಣ ಬೆಳೆಸುವ 72 ಗಂಟೆಗಳಿಗೂ ಮುನ್ನ ಅವರು ಕೊವಿಡ್ ಪರೀಕ್ಷೆ (COVID Test) ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಪಂಚದಾದ್ಯಂತ ಹೆಚ್ಚುತ್ತಿರುವ COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಅದರಲ್ಲೂ ಮುಖ್ಯವಾಗಿ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ ದೇಶಗಳಲ್ಲಿ ಹೆಚ್ಚುತ್ತಿರುವ ಕೊವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು

ಭಾರತದಲ್ಲಿ ಗುರುವಾರ 268 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಇದು ಡಿಸೆಂಬರ್ 2ರಿಂದ ಅತಿ ಹೆಚ್ಚು ದಾಖಲಾಗಿರುವ ಕೊವಿಡ್ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ