AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ

ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ
ಚೀನಾದಲ್ಲಿ ಕೊವಿಡ್
TV9 Web
| Edited By: |

Updated on: Jan 02, 2023 | 10:51 AM

Share

ನವದೆಹಲಿ: ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಜನವರಿ 1ರಿಂದ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು (RT-PCR Test) ಕಡ್ಡಾಯಗೊಳಿಸಲಾಗಿದೆ. ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ (Air Suvidha Portal) ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು. ಭಾರತಕ್ಕೆ ಪ್ರಯಾಣ ಬೆಳೆಸುವ 72 ಗಂಟೆಗಳಿಗೂ ಮುನ್ನ ಅವರು ಕೊವಿಡ್ ಪರೀಕ್ಷೆ (COVID Test) ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಪಂಚದಾದ್ಯಂತ ಹೆಚ್ಚುತ್ತಿರುವ COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಅದರಲ್ಲೂ ಮುಖ್ಯವಾಗಿ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ ದೇಶಗಳಲ್ಲಿ ಹೆಚ್ಚುತ್ತಿರುವ ಕೊವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು

ಭಾರತದಲ್ಲಿ ಗುರುವಾರ 268 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಇದು ಡಿಸೆಂಬರ್ 2ರಿಂದ ಅತಿ ಹೆಚ್ಚು ದಾಖಲಾಗಿರುವ ಕೊವಿಡ್ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ