AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccines: ಆಗಸ್ಟ್​​ನಲ್ಲಿ ಭಾರತ ತಲುಪಲಿವೆ 40 ಲಕ್ಷ ಡೋಸ್​ಗಳಷ್ಟು ಫೈಜರ್​, ಮಾಡೆರ್ನಾ ಲಸಿಕೆಗಳು..

ಕೊರೊನಾ ಲಸಿಕೆಯ ಅತಿದೊಡ್ಡ ಉತ್ಪಾದಕ ದೇಶ ಭಾರತ ಏಪ್ರಿಲ್​ವರೆಗೂ ನಮ್ಮಲ್ಲಿ ಉತ್ಪಾದನೆಯಾದ ಲಸಿಕೆಯನ್ನು ಕೊವ್ಯಾಕ್ಸ್ ಪ್ರೋಗ್ರಾಂನಡಿ ವಿವಿಧ ದೇಶಗಳಿಗೆ ನೀಡಿದೆ. ಆದರೆ ಏಪ್ರಿಲ್​ನಲ್ಲಿ ನಮ್ಮ ದೇಶದಲ್ಲಿಯೇ ಲಸಿಕೆ ಕೊರತೆ ಉಂಟಾದಾಗ ಅನಿವಾರ್ಯವಾಗಿ ನಿಲ್ಲಿಸಿದೆ.

Covid 19 Vaccines: ಆಗಸ್ಟ್​​ನಲ್ಲಿ ಭಾರತ ತಲುಪಲಿವೆ 40 ಲಕ್ಷ ಡೋಸ್​ಗಳಷ್ಟು ಫೈಜರ್​, ಮಾಡೆರ್ನಾ ಲಸಿಕೆಗಳು..
ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jul 08, 2021 | 5:27 PM

Share

ದೆಹಲಿ: ಕೊರೊನಾ ಮೂರನೇ ಅಲೆ ಏಳುವ ಹೊತ್ತಿಗೆ ಹೇಗಾದರೂ ಸರಿ ದೇಶದಲ್ಲಿ ಶೇ.70ರಷ್ಟಾದರೂ ಜನರಿಗೆ ಕೊವಿಡ್​ 19 ಲಸಿಕೆ ನೀಡಿ ಮುಗಿಸಿರಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ವಿದೇಶಿ ಲಸಿಕೆಗಳನ್ನು ಭಾರತದಲ್ಲಿ ಬಳಸುವ ಸಂಬಂಧ ಪರೀಕ್ಷೆಗಳು ತ್ವರಿತರಗತಿಯಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೊವ್ಯಾಕ್ಸ್​ ಎಂಬ ಜಾಗತಿಕ ಮಟ್ಟದ ಕೊರೊನಾ ಲಸಿಕೆ ಹಂಚಿಕೆ ಕಾರ್ಯಕ್ರಮದಡಿ ಮೊದಲ ಬಾರಿಗೆ ಭಾರತಕ್ಕೆ ವಿದೇಶಿ ನಿರ್ಮಿತ ಕೊವಿಡ್​ 19 ಲಸಿಕೆಗಳು ತಲುಪಲಿವೆ ಎಂದು ರಾಯಿಟರ್ಸ್​ ವರದಿ ಮಾಡಿದೆ. ಈ ಕಾರ್ಯಕ್ರಮದಡಿ ಭಾರತಕ್ಕೆ 30-40 ಲಕ್ಷದಷ್ಟು ಫೈಜರ್​ ಹಾಗೂ ಮಾಡೆರ್ನಾ ಲಸಿಕೆಗಳು ಆಗಸ್ಟ್​ನಲ್ಲಿ ತಲುಪಲಿವೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಲಸಿಕೆ ಮತ್ತು ರೋಗನಿರೋಧಕಗಳ ಜಾಗತಿಕ ಒಕ್ಕೂಟ (GAVI)ದ ವಕ್ತಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಲಸಿಕೆ ಹಂಚಿಕೆ ಕೊವ್ಯಾಕ್ಸ್ ಕಾರ್ಯಕ್ರಮದಡಿ ಅಮೆರಿಕ ನೀಡಲಿರುವ ಲಸಿಕೆಯ ಡೋಸ್​ಗಳು ಶೀಘ್ರದಲ್ಲೇ ಭಾರತಕ್ಕೆ ತಲುಪಲಿವೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆಯ ಅತಿದೊಡ್ಡ ಉತ್ಪಾದಕ ದೇಶ ಭಾರತ ಏಪ್ರಿಲ್​ವರೆಗೂ ನಮ್ಮಲ್ಲಿ ಉತ್ಪಾದನೆಯಾದ ಲಸಿಕೆಯನ್ನು ಕೊವ್ಯಾಕ್ಸ್ ಪ್ರೋಗ್ರಾಂನಡಿ ವಿವಿಧ ದೇಶಗಳಿಗೆ ನೀಡಿದೆ. ಆದರೆ ಏಪ್ರಿಲ್​ನಲ್ಲಿ ನಮ್ಮ ದೇಶದಲ್ಲಿಯೇ ಲಸಿಕೆ ಕೊರತೆ ಉಂಟಾದಾಗ ಅನಿವಾರ್ಯವಾಗಿ ನಿಲ್ಲಿಸಿದೆ. ಈಗ ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದ್ದು, ಮೂರನೇ ಅಲೆ ಶುರುವಾಗುವುದಕ್ಕೂ ಮೊದಲು ಲಸಿಕೆ ನೀಡಿ ಮುಗಿಯಬೇಕಿದೆ. ಸದ್ಯ ಭಾರತದಲ್ಲಿ ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳು ಬಳಕೆಯಾಗುತ್ತಿದೆ. ಅದರಲ್ಲೂ ದೇಶಾದ್ಯಂತ ಅತಿ ಹೆಚ್ಚು ಬಳಕೆಯಾಗುತ್ತಿರುವುದು ಸದ್ಯ ಕೊವಿಶೀಲ್ಡ್ ಎರಡು ಡೋಸ್​ಗಳ ಲಸಿಕೆ.

ಇದನ್ನೂ ಓದಿ: K Annamalai: ಮೋದಿ ಸಂಪುಟ ವಿಸ್ತರಣೆ ಎಫೆಕ್ಟ್; ಅಣ್ಣಾಮಲೈಗೆ ಒಲಿದು ಬರುತ್ತದಾ ಆ ಅದೃಷ್ಟ!?

India May Receive Pfizer, Moderna COVID 19 Vaccine By August

Published On - 12:56 pm, Thu, 8 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ