AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ; ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮಲ್ಲಿ ಬಹುತೇಕರಿಗೆ ಎಲೆಕ್ಟ್ರಿಕ್​ ಹೆದ್ದಾರಿ ಹೊಸ ಶಬ್ದ. ಜಗತ್ತಿನಲ್ಲೇ ಮೊದಲ ಬಾರಿಗೆ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣ ಮಾಡಿದ ದೇಶ ಸ್ವೀಡನ್​. ಇದೀಗ ಜರ್ಮನಿಯಲ್ಲೂ ಇದೆ.

ದೇಶದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ; ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಎಲೆಕ್ಟ್ರಿಕ್​ ಹೆದ್ದಾರಿ
Follow us
TV9 Web
| Updated By: Lakshmi Hegde

Updated on:Sep 18, 2021 | 4:40 PM

ದೇಶದಲ್ಲಿ ಸುಸ್ಥಿರ ರಸ್ತೆ, ಹೆದ್ದಾರಿ ನಿರ್ಮಾಣ, ಅಪಘಾತ ತಡೆ ಸಂಬಂಧ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹಲವು ವಿಶಿಷ್ಟ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹಾಗೇ, ಇತ್ತೀಚೆಗೆ ವಾಹನಗಳ ಕರ್ಕಶ ಹಾರ್ನ್​​ ತಪ್ಪಿಸುವ ದೃಷ್ಟಿಯಿಂದ ಇನ್ನು ಮುಂದೆ ವಾಹನಗಳ ಹಾರ್ನ್​ಗಳಿಗೆ ಹಿಂದೂಸ್ತಾನಿ ಸಂಗೀತ ವಾದ್ಯಗಳ ದನಿಯನ್ನು ಅಳವಡಿಸುವ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ಸಚಿವ ನಿತಿನ್​ ಗಡ್ಕರಿ ಹೇಳಿದ್ದರು. ಹಾಗೇ, ಈಗೊಂದು ಹೊಸ ವಿಷಯವನ್ನು ತಿಳಿಸಿದ್ದಾರೆ. ಅತಿ ಶೀಘ್ರದಲ್ಲೇ ದೆಹಲಿ ಮತ್ತು ರಾಜಸ್ಥಾನದ ಜೈಪುರದ ಮಧ್ಯೆ ಎಲೆಕ್ಟ್ರಿಕ್​ ಹೆದ್ದಾರಿ (Electric Highway) ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ. 

ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣ ಕೇಂದ್ರ ಸರ್ಕಾರದ ಕನಸಿನ ಯೋಜನೆಯಾಗಿದೆ. ಈ ಬಗ್ಗೆ ವಿದೇಶೀ ಕಂಪನಿಗಳೊಟ್ಟಿಗೆ ಮಾತುಕತೆ ನಡೆಸಲಾಗುತ್ತಿದೆ. ಅದು ಅಂತಿಮವಾಗುತ್ತಿದ್ದಂತೆ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣ ಕೆಲಸ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. ಹಾಗೊಮ್ಮೆ ಎಲ್ಲ ಸರಿಯಾಗಿ ದೆಹಲಿ ಮತ್ತು ಜೈಪುರ ನಡುವೆ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣಗೊಂಡರೆ ಅದು ದೇಶದ ಮೊದಲ ಎಲೆಕ್ಟ್ರಿಕ್​ ಹೈವೇ ಎನ್ನಿಸಿಕೊಳ್ಳಲಿದೆ. ಇನ್ನು ಇದರೊಟ್ಟಿಗೆ ದೆಹಲಿ ಮತ್ತು ಮುಂಬೈ ಮಧ್ಯೆಯೂ ಕೂಡ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣ ಸಂಬಂಧ ಸ್ವೀಡಿಶ್​ ಸಂಸ್ಥೆಯೊಟ್ಟಿಗೆ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಎಲೆಕ್ಟ್ರಿಕ್​ ಹೆದ್ದಾರಿ? ನಮ್ಮಲ್ಲಿ ಬಹುತೇಕರಿಗೆ ಇದು ಹೊಸ ಶಬ್ದ. ಜಗತ್ತಿನಲ್ಲೇ ಮೊದಲ ಬಾರಿಗೆ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣ ಮಾಡಿದ ದೇಶ ಸ್ವೀಡನ್​. ಇದೀಗ ಜರ್ಮನಿಯಲ್ಲೂ ಇದೆ. ಹಾಗೇ ಭಾರತ ಕೂಡ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ ನಿರ್ಮಾಣಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಇಡೀ ಜಗತ್ತಿನಲ್ಲಿ ಪೆಟ್ರೋಲ್​, ಡೀಸೆಲ್​​ಗೆ ಪರ್ಯಯ ಇಂಧನಗಳ ಹುಡುಕಾಟ ನಡೆದಿದೆ. ಅದರಲ್ಲಿ ಸದ್ಯ ಹೆಚ್ಚಾಗಿ ಪ್ರಸಿದ್ಧಿಯಾಗಿದ್ದು, ಎಲೆಕ್ಟ್ರಿಕ್​ ವಾಹನಗಳು. ಹೆಚ್ಚು ಜನರು ವಿದ್ಯುಚ್ಚಾಲಿತ ವಾಹನಗಳ ಬಳಕೆ, ಖರೀದಿಗೆ ಮುಂದಾಗುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಎಲೆಕ್ಟ್ರಿಕ್​ ಹೈವೇ ನಿರ್ಮಾಣ ಮಾಡುವುದರಿಂದ, ಇದರ ಮೂಲಕ ಚಲಿಸುವ ವಿದ್ಯುಚ್ಚಾಲಿತ ವಾಹನಗಳಿಗೆ, ಅದು ಬಸ್​, ಟ್ರಕ್​ ಯಾವುದೇ ಇರಬಹುದು ತುಂಬ ಅನುಕೂಲವಾಗುತ್ತದೆ. ವಾಹನಗಳು ಈ ಹೆದ್ದಾರಿಯಿಂದ ವಿದ್ಯುತ್​ ಶಕ್ತಿ ಪಡೆದು ಸಾಗುತ್ತವೆ.

ನಮ್ಮಲ್ಲಿ ವಿದ್ಯುಚ್ಚಾಲಿತ ವಾಹನಗಳೆಂದರೆ ಬೈಕ್​, ಕಾರಿನಂತಹ ಸಣ್ಣ ವಾಹನಗಳು ಎಂದೇ ಭಾವಿಸಲಾಗಿದೆ. ಆದರೆ ಬಸ್​, ಟ್ರಕ್​, ದೊಡ್ಡ ಲಾರಿಗಳೂ ಕೂಡ ವಿದ್ಯುಚ್ಚಾಲಿತ ಇಂಜಿನ್​ ಪಡೆಯಬಹುದು. ಭವಿಷ್ಯದಲ್ಲಿ ಈ ವಿದ್ಯುಚ್ಚಾಲಿತ ವಾಹನಗಳ ಸಂಖ್ಯೆಯೇ ಹೆಚ್ಚಾಗಲಿದೆ. ಅಷ್ಟೇ ಅಲ್ಲ, ಈಗ ಇರುವ ಪೆಟ್ರೋಲ್​, ಡೀಸೆಲ್ ಚಾಲಿತ ವಾಹನಗಳನ್ನೂ ವಿದ್ಯುಚ್ಚಾಲಿತ ಅಥವಾ ಬೇರೆ ಇನ್ಯಾವುದೇ ಪರ್ಯಾಯ ಇಂಧನ ಚಾಲಿತಗೊಳಿಸುವ ಕ್ರಮಕ್ಕೂ ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದೆ.

ಇದನ್ನೂ ಓದಿ: ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ

IPL 2021: 8 ತಂಡಗಳು, 8 ಸವಾಲುಗಳು; ಸಮಸ್ಯೆಗಳನ್ನು ಮೆಟ್ಟಿನಿಂತವರಿಗೆ ಒಲಿಯಲಿದೆ ಚಾಂಪಿಯನ್ ಪಟ್ಟ

Published On - 4:18 pm, Sat, 18 September 21

ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು