AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​​ನಿಂದ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಆತಂಕ; ಐಎಂಎಯಿಂದ ಎಚ್ಚರಿಕೆ

ಒಮಿಕ್ರಾನ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಐಎಂಎ ಸಲಹೆ ನೀಡಿದೆ.

ಒಮಿಕ್ರಾನ್​​ನಿಂದ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಆತಂಕ; ಐಎಂಎಯಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 07, 2021 | 10:41 AM

Share

ದೆಹಲಿ: ಕೊರೊನಾ ವೈರಸ್​ನ ಹೊಸ ರೂಪಾಂತರ ಒಮಿಕ್ರಾನ್ ಪರಿಸ್ಥಿತಿ ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಬೃಹತ್ ಪ್ರಮಾಣದಲ್ಲಿ ಕಾಣಿಸಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಎ ವೈದ್ಯರು, ಒಮಿಕ್ರಾನ್​ ತಳಿ ಆತಂಕ ಉಂಟು ಮಾಡುವಂಥ ಸೋಂಕು, ಇದು ವೇಗವಾಗಿ ಹರಡುತ್ತದೆ ಮತ್ತು ಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ.  ಭಾರತದಲ್ಲಿ ಕೊವಿಡ್​ 19 ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿತ್ತು. ನಿಧಾನಕ್ಕೆ ದೇಶ ಸಹಜಸ್ಥಿತಿಗೆ ಮರಳುತ್ತಿತ್ತು. ಹೀಗಿರುವಾಗ ಕಾಣಿಸಿಕೊಂಡ ಒಮಿಕ್ರಾನ್​ ಒಂದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ ಎಂದು ಐಎಂಎ ಹೇಳಿದೆ. 

ಒಮಿಕ್ರಾನ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಐಎಂಎ ಸಲಹೆ ನೀಡಿದೆ. ಮೊದಲು ಕೊವಿಡ್​ 19 ವಿರುದ್ಧ ಮುಂಚೂಣಿ ಹೋರಾಟದಲ್ಲಿ ಇರುವ ಆರೋಗ್ಯ ಸಿಬ್ಬಂದಿ ಸೇರಿ ಎಲ್ಲ ಫ್ರಂಟ್​ಲೈನ್​ ವರ್ಕರ್​ಗಳಿಗೂ ಇನ್ನೊಂದು ಡೋಸ್​ ಕೊವಿಡ್ 19 ಲಸಿಕೆ ನೀಡಬೇಕು. ಹಾಗೇ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ರೋಗಿಗಳಿಗೂ ಕೂಡ ಮೂರನೇ ಡೋಸ್ ಅಗತ್ಯವಿರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಇನ್ನು ಸಾಮಾನ್ಯ ಜನರೂ ಕೂಡ ಕೊರೊನಾ ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿರುವ ಐಎಂಎ, ಸದ್ಯಕ್ಕೇನೂ ಪ್ರಯಾಣ ನಿಷೇಧ ಬೇಕಾಗುವುದಿಲ್ಲ. ಆದರೆ ಸುಖಾಸುಮ್ಮನೆ ಪ್ರಯಾಣ ಮಾಡುವುದನ್ನು ಜನರು ನಿಲ್ಲಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮತಾಂತರ ಆರೋಪ: ಮಧ್ಯಪ್ರದೇಶದ ಕ್ಯಾಥೋಲಿಕ್ ಶಾಲೆ ಮೇಲೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ದಾಳಿ

Published On - 9:56 am, Tue, 7 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!