AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​​ನಿಂದ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಆತಂಕ; ಐಎಂಎಯಿಂದ ಎಚ್ಚರಿಕೆ

ಒಮಿಕ್ರಾನ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಐಎಂಎ ಸಲಹೆ ನೀಡಿದೆ.

ಒಮಿಕ್ರಾನ್​​ನಿಂದ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಆತಂಕ; ಐಎಂಎಯಿಂದ ಎಚ್ಚರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 07, 2021 | 10:41 AM

Share

ದೆಹಲಿ: ಕೊರೊನಾ ವೈರಸ್​ನ ಹೊಸ ರೂಪಾಂತರ ಒಮಿಕ್ರಾನ್ ಪರಿಸ್ಥಿತಿ ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಭಾರತದಲ್ಲಿ ಕೊವಿಡ್​ 19 ಮೂರನೇ ಅಲೆ ಬೃಹತ್ ಪ್ರಮಾಣದಲ್ಲಿ ಕಾಣಿಸಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ (IMA) ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಎ ವೈದ್ಯರು, ಒಮಿಕ್ರಾನ್​ ತಳಿ ಆತಂಕ ಉಂಟು ಮಾಡುವಂಥ ಸೋಂಕು, ಇದು ವೇಗವಾಗಿ ಹರಡುತ್ತದೆ ಮತ್ತು ಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಹೇಳಿದೆ.  ಭಾರತದಲ್ಲಿ ಕೊವಿಡ್​ 19 ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿತ್ತು. ನಿಧಾನಕ್ಕೆ ದೇಶ ಸಹಜಸ್ಥಿತಿಗೆ ಮರಳುತ್ತಿತ್ತು. ಹೀಗಿರುವಾಗ ಕಾಣಿಸಿಕೊಂಡ ಒಮಿಕ್ರಾನ್​ ಒಂದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ ಎಂದು ಐಎಂಎ ಹೇಳಿದೆ. 

ಒಮಿಕ್ರಾನ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಐಎಂಎ ಸಲಹೆ ನೀಡಿದೆ. ಮೊದಲು ಕೊವಿಡ್​ 19 ವಿರುದ್ಧ ಮುಂಚೂಣಿ ಹೋರಾಟದಲ್ಲಿ ಇರುವ ಆರೋಗ್ಯ ಸಿಬ್ಬಂದಿ ಸೇರಿ ಎಲ್ಲ ಫ್ರಂಟ್​ಲೈನ್​ ವರ್ಕರ್​ಗಳಿಗೂ ಇನ್ನೊಂದು ಡೋಸ್​ ಕೊವಿಡ್ 19 ಲಸಿಕೆ ನೀಡಬೇಕು. ಹಾಗೇ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ರೋಗಿಗಳಿಗೂ ಕೂಡ ಮೂರನೇ ಡೋಸ್ ಅಗತ್ಯವಿರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಇನ್ನು ಸಾಮಾನ್ಯ ಜನರೂ ಕೂಡ ಕೊರೊನಾ ನಿಯಂತ್ರಣ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿರುವ ಐಎಂಎ, ಸದ್ಯಕ್ಕೇನೂ ಪ್ರಯಾಣ ನಿಷೇಧ ಬೇಕಾಗುವುದಿಲ್ಲ. ಆದರೆ ಸುಖಾಸುಮ್ಮನೆ ಪ್ರಯಾಣ ಮಾಡುವುದನ್ನು ಜನರು ನಿಲ್ಲಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಮತಾಂತರ ಆರೋಪ: ಮಧ್ಯಪ್ರದೇಶದ ಕ್ಯಾಥೋಲಿಕ್ ಶಾಲೆ ಮೇಲೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ದಾಳಿ

Published On - 9:56 am, Tue, 7 December 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ