AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

Kerala Rain: ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ  ಆರೆಂಜ್​ ಅಲರ್ಟ್​​
ಮಳೆ
TV9 Web
| Edited By: |

Updated on:Oct 21, 2021 | 4:15 PM

Share

ಕೇರಳದಲ್ಲಿ ಮಳೆ (Kerala Rain)ಯಿಂದಾದ ಅವಾಂತರಗಳಿಂದ ಈಗಾಗಲೇ ಸುಮಾರು 42 ಮಂದಿ ಮೃತಪಟ್ಟಿದ್ದು, 6 ಜನ ಕಾಣೆಯಾಗಿದ್ದಾರೆ. ಜನ ಮೃತರಾಗಿದ್ದಾರೆ. ಆದರೆ ಸದ್ಯಕ್ಕಂತೂ ಅಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಭಾರತೀಯ ಹವಾಮಾನ ಇಲಾಖೆ(India Meteorological Department) ಅಕ್ಟೋಬರ್​ 25ರವರೆಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​​ ಘೋಷಿಸಿದೆ. ಅದರಲ್ಲಿ ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ  ಹಳದಿ ಎಚ್ಚರಿಕೆ ನೀಡಲಾಗಿದೆ. ಆರೆಂಜ್​ ಅಲರ್ಟ್​ ಎಂದರೆ 6 ಸಿಎಂನಿಂದ 20 ಸಿಎಂನವರೆಗೆ ಮಳೆಯಾಗಬಹುದು ಎಂಬ ಎಚ್ಚರಿಕೆಯಾಗಿದೆ. ಹಾಗೇ ಹಳದಿ ಅಲರ್ಟ್​ ಎಂದರೆ 6ಸಿಎಂನಿಂದ 11 ಸಿಎಂವರೆಗೆ ಮಳೆಯಾಗಬಹುದು ಎಂಬ ಮುನ್ಸೂಚನೆಯಾಗಿದೆ.

ಸದ್ಯ ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಇಂದು ಕೇರಳದ ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ಇರಬಹುದಾದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಸೂಚಿಸಲಾಗಿದೆ.  ಇಂದಿನಿಂದ ಅಕ್ಟೋಬರ್​ 25ರವರೆಗೂ ಕೂಡ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್​​ಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.  ಇದರೊಂದಿಗೆ ಅಕ್ಟೋಬರ್​ 22-24ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್​, ಗಿಲ್ಗಿಟ್​-ಬಲ್ಚಿಸ್ತಾನ್​, ಮುಜಾಫರಾಬಾದ್​, ಹಿಮಾಚಲಪ್ರದೇಶ ಮತ್ತು ಪಂಜಾಬ್​ಗಳಲ್ಲಿ ಗುಡುಗು-ಮಿಂಚು-ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದೂ ವರದಿ ನೀಡಿದೆ.

ಇದನ್ನೂ ಓದಿ: ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

Tesla: ಎಲೆಕ್ಟ್ರಿಕ್​ ವಾಹನಗಳ ಆಮದು ಸುಂಕ ಇಳಿಸುವಂತೆ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಟೆಸ್ಲಾ ಒತ್ತಾಯ

Published On - 4:14 pm, Thu, 21 October 21

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್