AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

Kerala Rain: ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ  ಆರೆಂಜ್​ ಅಲರ್ಟ್​​
ಮಳೆ
TV9 Web
| Edited By: |

Updated on:Oct 21, 2021 | 4:15 PM

Share

ಕೇರಳದಲ್ಲಿ ಮಳೆ (Kerala Rain)ಯಿಂದಾದ ಅವಾಂತರಗಳಿಂದ ಈಗಾಗಲೇ ಸುಮಾರು 42 ಮಂದಿ ಮೃತಪಟ್ಟಿದ್ದು, 6 ಜನ ಕಾಣೆಯಾಗಿದ್ದಾರೆ. ಜನ ಮೃತರಾಗಿದ್ದಾರೆ. ಆದರೆ ಸದ್ಯಕ್ಕಂತೂ ಅಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಭಾರತೀಯ ಹವಾಮಾನ ಇಲಾಖೆ(India Meteorological Department) ಅಕ್ಟೋಬರ್​ 25ರವರೆಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​​ ಘೋಷಿಸಿದೆ. ಅದರಲ್ಲಿ ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ  ಹಳದಿ ಎಚ್ಚರಿಕೆ ನೀಡಲಾಗಿದೆ. ಆರೆಂಜ್​ ಅಲರ್ಟ್​ ಎಂದರೆ 6 ಸಿಎಂನಿಂದ 20 ಸಿಎಂನವರೆಗೆ ಮಳೆಯಾಗಬಹುದು ಎಂಬ ಎಚ್ಚರಿಕೆಯಾಗಿದೆ. ಹಾಗೇ ಹಳದಿ ಅಲರ್ಟ್​ ಎಂದರೆ 6ಸಿಎಂನಿಂದ 11 ಸಿಎಂವರೆಗೆ ಮಳೆಯಾಗಬಹುದು ಎಂಬ ಮುನ್ಸೂಚನೆಯಾಗಿದೆ.

ಸದ್ಯ ಕೇರಳದಲ್ಲಿ ನೈಋತ್ಯ ಮಾನ್ಸೂನ್​ ಸಕ್ರಿಯವಾಗಿದೆ. ಹೀಗಾಗಿ ಕೇರಳದ ಬಹುತೇಕ ಪ್ರದೇಶಗಳಲ್ಲಿ ಮತ್ತು ಲಕ್ಷದ್ವೀಪದ ವಿವಿಧ ಕಡೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ, ಇಂದು ಕೇರಳದ ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ಇರಬಹುದಾದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದೆಂದು ಸೂಚಿಸಲಾಗಿದೆ.  ಇಂದಿನಿಂದ ಅಕ್ಟೋಬರ್​ 25ರವರೆಗೂ ಕೂಡ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕರೈಕಲ್​​ಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.  ಇದರೊಂದಿಗೆ ಅಕ್ಟೋಬರ್​ 22-24ರ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಲಡಾಖ್​, ಗಿಲ್ಗಿಟ್​-ಬಲ್ಚಿಸ್ತಾನ್​, ಮುಜಾಫರಾಬಾದ್​, ಹಿಮಾಚಲಪ್ರದೇಶ ಮತ್ತು ಪಂಜಾಬ್​ಗಳಲ್ಲಿ ಗುಡುಗು-ಮಿಂಚು-ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದೂ ವರದಿ ನೀಡಿದೆ.

ಇದನ್ನೂ ಓದಿ: ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

Tesla: ಎಲೆಕ್ಟ್ರಿಕ್​ ವಾಹನಗಳ ಆಮದು ಸುಂಕ ಇಳಿಸುವಂತೆ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಟೆಸ್ಲಾ ಒತ್ತಾಯ

Published On - 4:14 pm, Thu, 21 October 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ