AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 16ರ ವೇಳೆ ಅರಬ್ಬೀ ಸಮುದ್ರದಲ್ಲಿ ರೂಪುಗೊಳ್ಳಲಿದೆ 2021ರ ಮೊದಲ ಚಂಡಮಾರುತ

ಮೇ 14 ರ ಬೆಳಿಗ್ಗೆ ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಲಕ್ಷದ್ವೀಪದ ಪಕ್ಕದಲ್ಲಿರುವ ಈ ಪ್ರದೇಶದಾದ್ಯಂತ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ

ಮೇ 16ರ ವೇಳೆ ಅರಬ್ಬೀ ಸಮುದ್ರದಲ್ಲಿ ರೂಪುಗೊಳ್ಳಲಿದೆ 2021ರ ಮೊದಲ ಚಂಡಮಾರುತ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 11, 2021 | 6:23 PM

Share

ದೆಹಲಿ: ಮೇ 16ರ ಹೊತ್ತಿಗೆ ಅರಬ್ಬೀ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ರೂಪುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಹೇಳಿದೆ. 2021ರ ಮೊದಲ ಚಂಡಮಾರುತವು ಹಿಂದೂ ಮಹಾಸಾಗರದ ಉತ್ತರ ಭಾಗದಲ್ಲಿ ರೂಪುಗೊಂದು ತೌಕ್ಟೆ ಎಂಬ ಹೆಸರು ಪಡೆಯಲಿದೆ. ಚಂಡಮಾರುತಕ್ಕೆ ಈ ಹೆಸರನ್ನಿಟ್ಟಿದ್ದು ಮ್ಯಾನ್ಮಾರ್. ಈ ಪ್ರದೇಶದಲ್ಲಿರುವ ಸಮುದ್ರಗಳಲ್ಲಿ ಚಂಡಮಾರುತ ರೂಪುಗೊಳ್ಳುವುದು ಅಧಿಕ. ಗುರುವಾರದಿಂದ ಮೇ 16 ರವರೆಗೆ ಲಕ್ಷದ್ವೀಪ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಮೇಲೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

ಮ್ಯಾಡೆನ್ ಜೂಲಿಯನ್ ಆಸಿಲೇಷನ್ (MJO) ಯ ಪ್ರಸ್ತುತ ಸ್ಥಳವು ಅರಬ್ಬೀ ಸಮುದ್ರದ ಮೇಲೆ ಇರುವುದಿಂದ ಹೆಚ್ಚಿನ ಮಳೆಯಾಗಲು ಅನುಕೂಲಕರವಾಗಿದೆ. ಒಂದು ವಾರದವರೆಗೆ ಮಳೆ ಇರಲಿದೆ.

ಮೇ 14 ರ ಬೆಳಿಗ್ಗೆ ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಲಕ್ಷದ್ವೀಪದ ಪಕ್ಕದಲ್ಲಿರುವ ಈ ಪ್ರದೇಶದಾದ್ಯಂತ ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ. ಇದು ಮೇ 16 ರ ಸುಮಾರಿಗೆ ಚಂಡಮಾರುತದತೀವ್ರವಾಗಬಹುದುಎಂದು ಹವಾಮಾನ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಗುರುವಾರದಿಂದ ಸಮುದ್ರ ಮತ್ತಷ್ಟು ಬಿರುಸಾಗುಲ ನಿರೀಕ್ಷೆಯಿದೆ, ಈ ದೃಷ್ಟಿಯಿಂದ ಈ ಕರಾವಳಿ ರಾಜ್ಯಗಳ ಮೀನುಗಾರರಿಗೆ ಶುಕ್ರವಾರದಿಂದ ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿದ್ದವರು ಬುಧವಾರ ರಾತ್ರಿಯೊಳಗೆ ಸುರಕ್ಷತೆಗೆ ಮರಳುವಂತೆ ಕೋರಲಾಗಿದೆ.​ ​

ಸಮುದ್ರದ ಪರಿಸ್ಥಿತಿಗಳು, ಮುಖ್ಯವಾಗಿ ಕೊಮೊರಿನ್ ಪ್ರದೇಶ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಉದ್ದಕ್ಕೂ, ಮೇ 14 ಮತ್ತು 16 ರ ನಡುವೆ ತುಂಬಾ ಒರಟಾಗಿರುತ್ತದೆ. ಮೇ 15 ರಂದು ಗೋವಾ ಮತ್ತು ಮಹಾರಾಷ್ಟ್ರದ ತೀರಗಳಲ್ಲಿಯೂ ಇದೇ ರೀತಿಯ ಒರಟು ಸಮುದ್ರ ಸ್ಥಿತಿ ನಿರೀಕ್ಷಿಸಲಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಿಂದ 60 ಕಿ.ಮೀ / ಗಂಟೆ ವೇಗವಾಗಿ ಇಜು ಲಕ್ಷದ್ವೀಪ, ಮಾಲ್ಡೀವ್ಸ್ ಪ್ರದೇಶಗಳಿಗೆ ಗುರುವಾರ ಅಪ್ಪಳಿಸಲಿದೆ. ಕೇರಳ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ತೀರಗಳು ಭಾನುವಾರದವರೆಗೆ ಇದೇ ರೀತಿಯ ಗಾಳಿ ಬೀಸುತ್ತವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಲಕ್ಷದ್ವೀಪದಲ್ಲಿ ವಾರಾಂತ್ಯದಲ್ಲಿ ಉಬ್ಬರವಿಳಿತಕ್ಕಿಂತ ಸುಮಾರು 1 ಮೀಟರ್ ಉಬ್ಬರವಿಳಿತ ಕಂಡು ಬರಲಿದ್ದು ತಗ್ಗು ಪ್ರದೇಶಗಳು ಮುಳುಗುವ ಸಾಧ್ಯತೆಯಿದೆ.

ಇದನ್ನೂ ಓದಿ:  Bengaluru Rain: ಬೆಂಗಳೂರು ಸೇರಿ ವಿವಿಧೆಡೆ ಧಾರಾಕಾರ ಮಳೆ

Fact Check: 5ಜಿ ತಂತ್ರಜ್ಞಾನ ಪ್ರಯೋಗಕ್ಕೂ ಕೋವಿಡ್-19ಗೂ ಯಾವುದೇ ಸಂಬಂಧವಿಲ್ಲ

(India Meteorological Department says this year’s first cyclone likely to form in the Arabian Sea around 2021 May 16)

Published On - 6:23 pm, Tue, 11 May 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ