AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather update: ಜೂನ್ 17 ರವರೆಗೆ ದೆಹಲಿ, ಯುಪಿಯಲ್ಲಿ ಬಿಸಿಗಾಳಿ; ಈಶಾನ್ಯದಲ್ಲಿ ಭಾರೀ ಮಳೆ

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಈ ವಾರದ ಗರಿಷ್ಠ ತಾಪಮಾನವು ಒಂದೇ ಆಗಿರುವ ಸಾಧ್ಯತೆಯಿರುವುದರಿಂದ ಮುಂಬರುವ ದಿನಗಳಲ್ಲಿ ಇದರಲ್ಲಿ ಬದಲಾವಣೆ ಇರುವುದಿಲ್ಲ. ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಚಂಡೀಗಢ, ಜಾರ್ಖಂಡ್, ಹರ್ಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಬುಧವಾರ ಗರಿಷ್ಠ ತಾಪಮಾನವು 45-47 ಡಿಗ್ರಿ ಸೆಲ್ಸಿಯಸ್ ಆಗಿದ್ದು ಕಾನ್ಪುರದಲ್ಲಿ ತಾಪಮಾನವು 47.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

Weather update: ಜೂನ್ 17 ರವರೆಗೆ ದೆಹಲಿ, ಯುಪಿಯಲ್ಲಿ ಬಿಸಿಗಾಳಿ; ಈಶಾನ್ಯದಲ್ಲಿ ಭಾರೀ ಮಳೆ
ದೆಹಲಿಯಲ್ಲಿ ಬಿಸಿಲು
ರಶ್ಮಿ ಕಲ್ಲಕಟ್ಟ
|

Updated on: Jun 13, 2024 | 8:48 PM

Share

ದೆಹಲಿ ಜೂನ್ 13: ದೆಹಲಿ, ಉತ್ತರ ಪ್ರದೇಶ, ಪಂಜಾಬ್ ಮತ್ತು ಚಂಡೀಗಢದಲ್ಲಿ ಮುಂಬರುವ 4 ರಿಂದ 5 ದಿನಗಳವರೆಗೆ ಬಿಸಿಗಾಳಿ (heatwave) ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಎಚ್ಚರಿಸಿದೆ. “ಮುಂದಿನ 4-5 ದಿನಗಳಲ್ಲಿ ಭಾರತದ ಉತ್ತರ ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರ ಶಾಖದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರದ ರಾಜ್ಯಗಳಲ್ಲಿ ಬಿಸಿಗಾಳಿ ಮುಂದುವರಿಯಲಿದ್ದು, ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ. 4-5 ದಿನಗಳಲ್ಲಿ ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಈಶಾನ್ಯ ಭಾರತದಲ್ಲಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ.

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಈ ವಾರದ ಗರಿಷ್ಠ ತಾಪಮಾನವು ಒಂದೇ ಆಗಿರುವ ಸಾಧ್ಯತೆಯಿರುವುದರಿಂದ ಮುಂಬರುವ ದಿನಗಳಲ್ಲಿ ಇದರಲ್ಲಿ ಬದಲಾವಣೆ ಇರುವುದಿಲ್ಲ. ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಚಂಡೀಗಢ, ಜಾರ್ಖಂಡ್, ಹರ್ಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಬುಧವಾರ ಗರಿಷ್ಠ ತಾಪಮಾನವು 45-47 ಡಿಗ್ರಿ ಸೆಲ್ಸಿಯಸ್ ಆಗಿದ್ದು ಕಾನ್ಪುರದಲ್ಲಿ ತಾಪಮಾನವು 47.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಜೂನ್ 13 ರಿಂದ ಜೂನ್ 17 ರವರೆಗೆ ತೀವ್ರತರವಾದ ಬಿಸಿ ಗಾಳಿ ಇರಲಿದ್ದು, ಗಂಗಾನದಿ ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಜೂನ್ 13 ರಿಂದ 15 ರವರೆಗೆ ಬಿಸಿಗಾಳಿ ಇರಲಿದೆ.  ಜೂನ್ 13 ರಿಂದ 17 ರವರೆಗೆ ದೆಹಲಿ-ಹರಿಯಾಣ-ಚಂಡೀಗಢ ಪ್ರದೇಶ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ. ಆದರೆ ತೀವ್ರ ಶಾಖದ ಪರಿಸ್ಥಿತಿಗಳು ಜೂನ್ 16 ಮತ್ತು 17 ರಂದು ಈ ಪ್ರದೇಶಗಳಲ್ಲಿ ಪ್ರತ್ಯೇಕ ಪಾಕೆಟ್‌ಗಳ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: Violence in Manipur: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೋರೆಯಲ್ಲಿ ಶಾಲೆಗೆ, ಜಿರಿಬಾಮ್‌ನಲ್ಲಿ ಮನೆಗಳಿಗೆ ಬೆಂಕಿ

ಕಳೆದ ವಾರ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಕರಾವಳಿ ಪ್ರದೇಶಗಳಲ್ಲಿ ಜಲಾವೃತ ಮತ್ತು ಪ್ರವಾಹ ಉಂಟಾಗಿದೆ. ಇಂದು ಭಾರೀ ಮಳೆಯಿಂದಾಗಿ ತೀಸ್ತಾ ನದಿ ಉಕ್ಕಿ ಹರಿಯುತ್ತಿದ್ದು, ಪಶ್ಚಿಮ ಬಂಗಾಳದ ಕೆಲವು ಭಾಗಗಳು ಜಲಾವೃತಗೊಂಡಿವೆ. ಗುಡುಗು ಸಹಿತ ಭಾರೀ ಮಳೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಉತ್ತರ ಸಿಕ್ಕಿಂನಲ್ಲಿ ಭಾರಿ ಭೂಕುಸಿತದಿಂದಾಗಿ ಒಬ್ಬರು ಸಾವಿಗೀಡಾಗಿದ್ದು ಐವರು ನಾಪತ್ತೆಯಾಗಿದ್ದಾರೆ.

ಬುಧವಾರ ರಾತ್ರಿಯಿಡೀ ಸುರಿಯುತ್ತಿರುವ ನಿರಂತರ ಮಳೆಯು ತೀಸ್ತಾ ಬಜಾರ್‌ನಲ್ಲಿ ಡಾರ್ಜಿಲಿಂಗ್ ಮತ್ತು ಕಾಲಿಂಪಾಂಗ್‌ಗೆ ಸಂಪರ್ಕ ಕಲ್ಪಿಸುವ ಹಲವಾರು ರಸ್ತೆಗಳು ಮತ್ತು ಗೈಲ್ ಖೋಲಾದಂತಹ ಇತರ ಪ್ರದೇಶಗಳು ಜಲಾವೃತಗೊಂಡಿದ್ದರಿಂದ ಪರಿಸ್ಥಿತಿ ಹದಗೆಡಲು ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ