AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂದಿಳಿಯಿತು ಇನ್ನೂ 3 ರಫೇಲ್​ ಯುದ್ಧ ವಿಮಾನ

7000 ಕಿ.ಮೀ. ಕ್ರಮಿಸಿ ಇಂದು ಭಾರತಕ್ಕೆ 3 ರಫೇಲ್​ ಜೆಟ್​ಗಳು ಬಂದಿಳಿದಿವೆ.  ಈ ಕುರಿತು ಭಾರತೀಯ ವಾಯುಸೇನೆ ಮಾಹಿತಿ ನೀಡಿದೆ.

ಭಾರತಕ್ಕೆ ಬಂದಿಳಿಯಿತು ಇನ್ನೂ 3 ರಫೇಲ್​ ಯುದ್ಧ ವಿಮಾನ
ರಫೇಲ್​ ವಿಮಾನ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 10:11 PM

Share

ನವದೆಹಲಿ: ನೆರೆಯ ಚೀನಾ ದೇಶವು ಗಡಿಯಲ್ಲಿ ಕಾಲ್ಕೆರೆದುಕೊಂಡು ಜಗಳಕ್ಕೆ ಬರುತ್ತಿರುವಾಗಲೇ ಭಾರತದ ವಾಯುಸೇನೆ ಬಲ ಹೆಚ್ಚುತ್ತಿದೆ. ಫ್ರಾನ್ಸ್​​ನಿಂದ 3ನೇ ಹಂತದಲ್ಲಿ 3 ರಫೇಲ್​ ವಿಮಾನಗಳು ಭಾರತಕ್ಕೆ ಬಂದಿವೆ.

7000 ಕಿ.ಮೀ. ಕ್ರಮಿಸಿ ಇಂದು ಭಾರತಕ್ಕೆ 3 ರಫೇಲ್​ ಜೆಟ್​ಗಳು ಬಂದಿಳಿದಿವೆ.  ಈ ಕುರಿತು ಭಾರತೀಯ ವಾಯುಸೇನೆ ಮಾಹಿತಿ ನೀಡಿದೆ. ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವಾಗಲೇ ದೇಶದ ವಾಯುಪಡೆಗೆ ಹೊಸ ಬಲ ನೀಡಿದಂತಾಗಿದೆ.

ರಫೇಲ್ ಬಂದ ಬಗ್ಗೆ ವಾಯುಪಡೆ ಟ್ವೀಟ್ ಇಲ್ಲಿದೆ

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳನ್ನು ತರಿಸಿಕೊಳ್ಳುತ್ತಿದೆ. ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದಿದ್ದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ.

ಮೊದಲ ಹಂತದಲ್ಲಿ ರಫೇಲ್​ ಯುದ್ಧವಿಮಾನಗಳು ಅಂಬಾಲಾಗೆ ಬಂದಿಳಿದಾಗ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್. ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಾದ ನಂತರ ಮತ್ತೊಂದು ಬ್ಯಾಚ್​ನಲ್ಲಿ ಇನ್ನೂ 3 ರಫೇಲ್​ ಜೆಟ್​ಗಳು ಬಂದಿಳಿದಿದ್ದವು. ಇದೀಗ ಮತ್ತೊಂದು ಬ್ಯಾಚ್​ನಲ್ಲಿ 3 ರಫೇಲ್​ ವಿಮಾನಗಳು ಬಂದಿವೆ.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ