AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?

ಸಿಖ್ ಸಮುದಾಯದ ಜನರ ಗೌರವದ ಸಂಕೇತವಾಗಿದೆ ನಿಶಾನ್ ಸಾಹಿಬ್ ಎಂಬ ಧ್ವಜ. ಖಂದಾ ಸಂಕೇತವು ಸತ್ಯ ಮತ್ತು ಸುಳ್ಳನ್ನು ಬೇರ್ಪಡಿಸುವ ಶಕ್ತಿಯುತ ಆಯುಧ ಎಂದು ಇವರು ನಂಬುತ್ತಾರೆ.

Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?
ಗಣರಾಜ್ಯೋತ್ಸವದಂದು ಕೆಂಪುಕೋಟೆಯಲ್ಲಿ ಅನ್ಯಧ್ವಜ ಹಾರಾಡಿಸಿದ ಪ್ರಕರಣವನ್ನು ಪೊಲೀಸರು ಬೆನ್ನತ್ತಿದ್ದಾರೆ.
ರಶ್ಮಿ ಕಲ್ಲಕಟ್ಟ
| Edited By: |

Updated on:Jan 26, 2021 | 9:22 PM

Share

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮಂಗಳವಾರ ಟ್ರ್ಯಾಕ್ಟರ್ ಮೆರವಣಿಗೆ ನಡೆಸಿ ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದರು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಅಲ್ಲಿದ್ದ ಧ್ವಜಸ್ತಂಭಕ್ಕೆ ಹತ್ತಿ ಕೇಸರಿ ಬಣ್ಣದ ಧ್ವಜ ಮತ್ತು ರೈತಸಂಘದ ಧ್ವಜವನ್ನು ಹಾರಿಸಿದ್ದಾರೆ. ಇದಾದ ನಂತರ ಕೆಂಪುಕೋಟೆಯ ಗುಮ್ಮಟದ ಮೇಲೆ, ಕೆಂಪುಕೋಟೆಯ ಕೆಳಗೆ ಹೀಗೆ ಮೂರು ಬಾರಿ ಪ್ರತಿಭಟನಾಕಾರರು ಧ್ವಜಾರೋಹಣ ಮಾಡಿದ್ದಾರೆ.

ರೈತರು ನೆಟ್ಟ ಕೇಸರಿ ಧ್ವಜ ಯಾವುದು? ಭಾರತೀಯ ಕಿಸಾನ್ ಸಂಘದ ಹಳದಿ ಬಣ್ಣದ ಬಾವುಟದ ಜತೆ ರೈತರು ಕೇಸರಿ ಬಣ್ಣದ ಧ್ವಜವೊಂದನ್ನು ಹಾರಿಸಿದ್ದಾರೆ. ಈ ಕೇಸರಿ ಧ್ವಜದ ಹೆಸರು ನಿಶಾನ್ ಸಾಹಿಬ್. ತ್ರಿಕೋನಾಕಾರದಲ್ಲಿರುವ ಈ ಧ್ವಜದ ಮಧ್ಯೆ ಸಿಖ್ ಸಂಕೇತ ಖಂದಾ ಇದೆ. ಎರಡು ಅಲಗಿರುವ ಖಡ್ಗ ಮತ್ತು ಚಕ್ರವೇ ಸಿಖ್ ಸಂಕೇತ. ಸಾಮಾನ್ಯವಾಗಿ ನಿಶಾನ್ ಸಾಹಿಬ್ ಅನ್ನು ಗುರುದ್ವಾರದ ಹೊರಗೆ ಕೇಸರಿ ಬಟ್ಟೆಯ ಹೊದಿಕೆ ಇರುವ ಸ್ಟೀಲ್ ಧ್ವಜಸ್ತಂಭದಲ್ಲಿ ಹಾರಿಸಲಾಗುತ್ತದೆ.

ಏನಿದರ ಮಹತ್ವ? ಸಿಖ್ ಸಮುದಾಯದ ಜನರ ಗೌರವದ ಸಂಕೇತ ಈ ಧ್ವಜ. ಸತ್ಯ ಮತ್ತು ಸುಳ್ಳನ್ನು ಬೇರ್ಪಡಿಸುವ ಶಕ್ತಿಯುತ ಆಯುಧ ಖಂದಾ ಎಂದು ಸಿಖ್ಖರು ನಂಬುತ್ತಾರೆ. ಗುರು ಗೋಬಿಂದ್ ಸಿಂಗ್ ಅವರು ನೀರಿನ ಮೇಲೆ ಖಂದಾವನ್ನು ಅಲುಗಾಡಿಸಿ ಅದರಿಂದ ಅಮೃತವನ್ನು (ಪವಿತ್ರ ನೀರು) ತಯಾರಿಸಿದರು ಎಂದು ಹೇಳಲಾಗುತ್ತದೆ.

ಗುರು ಗೋಬಿಂದ್ ಸಿಂಗ್ ಅವರ ನಿಶಾನ್ ಸಾಹಿಬ್​ನಲ್ಲಿ ವಾಹೇಗುರು ಜೀ ಕಿ ಫತೇ (ದೇವರ ಗೆಲುವು) ಎಂದು ಬರೆಯಲಾಗಿದೆ. ಅದೇ ವೇಳೆ ಮಹಾರಾಜಾ ರಂಜೀತ್ ಸಿಂಗ್ ಅವರ ನಿಶಾನ್ ಸಾಹಿಬ್ ನಲ್ಲಿ ಅಕಲ್ ಸಹೈ (ದೇವರು ಒಳ್ಳೆದು ಮಾಡಲಿ) ಎಂದು ಬರೆಯಲಾಗಿದೆ.

ಯುದ್ಧದ ಕತೆಯ ಮೆಲುಕು ನಿಶಾನ್ ಸಾಹಿಬ್ ಹಿಡಿದಿದ್ದ ಭಾಯಿ ಆಲಂ ಸಿಂಗ್ ಅವರನ್ನು ಯುದ್ಧವೊಂದರಲ್ಲಿ ಮೊಘಲ್ ಸೈನ್ಯ ವಶಕ್ಕೆ ಪಡೆದಕೊಂಡಿತ್ತು ಎಂಬ ಕತೆ ಇದೆ. ಕೈಯಲ್ಲಿರುವ ನಿಶಾನ್ ಸಾಹಿಬ್​ನ್ನು ಬಿಸಾಡು, ಇಲ್ಲವಾದರೆ ನಿನ್ನ ಕೈ ಕತ್ತರಿಸುತ್ತೇವೆ ಎಂದು ಶತ್ರು ಸೈನಿಕರು ಬೆದರಿಕೆಯೊಡ್ಡಿದರು. ಆಗ ಸಿಂಗ್, ನನ್ನ ಕೈ ಕತ್ತರಿಸಿದರೆ ನಾನು ಕಾಲಿನಿಂದ ಈ ಧ್ವಜ ಹಿಡಿವೆ ಎಂದು ಉತ್ತರಿಸುತ್ತಾರೆ. ಹಾಗಾದರೆ ಕಾಲು ಕತ್ತರಿಸುತ್ತೇವೆ ಎಂದು ಶತ್ರು ಸೈನಿಕರು ಹೇಳಿದರು, ನೀವು ಕಾಲು ಕತ್ತರಿಸಿದರೆ ನಾನು ಅದನ್ನು ಬಾಯಿಯಲ್ಲಿ ಹಿಡಿವೆ ಅಂತಾರೆ ಸಿಂಗ್. ನಿನ್ನ ತಲೆಯನ್ನೇ ಕತ್ತರಿಸಿದರೆ? ಎಂದು ಹೇಳಿದಾಗ, ನಾನು ಯಾರ ಧ್ವಜವನ್ನು ಹಿಡಿದಿರುವೆನೋ ಆ ಗುರುವೇ ನನ್ನನ್ನು ಕಾಪಾಡುತ್ತಾರೆ ಎಂದು ಉತ್ತರಿಸಿದ್ದರಂತೆ ಭಾಯಿ ಆಲಂ ಸಿಂಗ್.

In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

Delhi Farmers Tractor Rally Photos | ಇಂದು ದೆಹಲಿಯನ್ನು ನೋಡಿದ ಕಣ್ಣುಗಳು

Delhi Farmers Tractor Rally Photos | ಕೆಂಪುಕೋಟೆಗೆ ರೈತರ ಮುತ್ತಿಗೆ

Published On - 9:17 pm, Tue, 26 January 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ