AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ
ಚಟ್ಟ ಹೊತ್ತು ನಡೆಯುತ್ತಿರುವ ಸಿರೀಷಾ (ವಿಡಿಯೊ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 03, 2021 | 5:13 PM

ಹೈದರಾಬಾದ್: ಆಂಧ್ರಪ್ರದೇಶದ ಮಹಿಳಾ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಮಾಡಿರುವ ಮಾನವೀಯ ಕೆಲಸವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಅನಾಥ ವೃದ್ಧನ ಶವ ಸಂಸ್ಕಾರ ಮಾಡಲು ಸ್ಥಳೀಯರು ನಿರಾಕರಿಸಿದಾಗ, ಶವವನ್ನು ಪೊಲೀಸ್ ಅಧಿಕಾರಿ 2 ಕಿಲೋಮೀಟರ್​ನಷ್ಟು ದೂರ ಹೊತ್ತು ತಂದು, ಗೌರವಯುತವಾದ ಅಂತಿಮ ವಿಧಿವಿಧಾನ ನೆರವೇರಿಸಿದರು.

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ. ಸಾವಿರಾರು ಮಂದಿ ಆಕೆಯ ಕಾರ್ಯವನ್ನು ಮನಸಾರೆ ಶ್ಲಾಘಿಸಿದ್ದಾರೆ.

ಸಿರೀಷಾ ಮತ್ತು ಇನ್ನೊಬ್ಬ ವ್ಯಕ್ತಿ ಚಟ್ಟ ಹೊತ್ತು ನಡೆಯುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚಟ್ಟ ಹೊತ್ತು ಸಾಗುತ್ತಿರುವ ಸಿರೀಷಾ ಅವರಲ್ಲಿ ಬಿಟ್ಟು ಬಿಡಿ ಮೇಡಂ ಎಂದು ಒಬ್ಬರು ಹೇಳಿದಾಗ, ಪರವಾಗಿಲ್ಲ ಎಂದು ಸಿರೀಷಾ ಉತ್ತರಿಸಿದ್ದಾರೆ. ಲಲಿತಾ ಚಾರಿಟೇಬಲ್ ಟ್ರಸ್ಟ್ ಗೆ ಮೃತದೇಹವನ್ನು ಒಪ್ಪಿಸಿದ ಸಿರೀಷಾ , ಅಂತ್ಯ ಸಂಸ್ಕಾರಕ್ಕೂ ಸಹಾಯಮಾಡಿದ್ದಾರೆ.

ಸಿರೀಷಾ ಅವರ ಮಾನವೀಯ ನಡೆಗೆ ಡಿಜಿಪಿ ಗೌತಂ ಸವಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಪೊಲೀಸ್ ಟ್ವಿಟರ್ ಹ್ಯಾಂಡ್ಲ್ ಟ್ವೀಟ್ ಮಾಡಿದೆ.

ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ‘ಕನಸಿನ ರಾಣೆಬೆನ್ನೂರು’ ತಂಡ

ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ