AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ
ಚಟ್ಟ ಹೊತ್ತು ನಡೆಯುತ್ತಿರುವ ಸಿರೀಷಾ (ವಿಡಿಯೊ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 03, 2021 | 5:13 PM

Share

ಹೈದರಾಬಾದ್: ಆಂಧ್ರಪ್ರದೇಶದ ಮಹಿಳಾ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಮಾಡಿರುವ ಮಾನವೀಯ ಕೆಲಸವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಅನಾಥ ವೃದ್ಧನ ಶವ ಸಂಸ್ಕಾರ ಮಾಡಲು ಸ್ಥಳೀಯರು ನಿರಾಕರಿಸಿದಾಗ, ಶವವನ್ನು ಪೊಲೀಸ್ ಅಧಿಕಾರಿ 2 ಕಿಲೋಮೀಟರ್​ನಷ್ಟು ದೂರ ಹೊತ್ತು ತಂದು, ಗೌರವಯುತವಾದ ಅಂತಿಮ ವಿಧಿವಿಧಾನ ನೆರವೇರಿಸಿದರು.

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ. ಸಾವಿರಾರು ಮಂದಿ ಆಕೆಯ ಕಾರ್ಯವನ್ನು ಮನಸಾರೆ ಶ್ಲಾಘಿಸಿದ್ದಾರೆ.

ಸಿರೀಷಾ ಮತ್ತು ಇನ್ನೊಬ್ಬ ವ್ಯಕ್ತಿ ಚಟ್ಟ ಹೊತ್ತು ನಡೆಯುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚಟ್ಟ ಹೊತ್ತು ಸಾಗುತ್ತಿರುವ ಸಿರೀಷಾ ಅವರಲ್ಲಿ ಬಿಟ್ಟು ಬಿಡಿ ಮೇಡಂ ಎಂದು ಒಬ್ಬರು ಹೇಳಿದಾಗ, ಪರವಾಗಿಲ್ಲ ಎಂದು ಸಿರೀಷಾ ಉತ್ತರಿಸಿದ್ದಾರೆ. ಲಲಿತಾ ಚಾರಿಟೇಬಲ್ ಟ್ರಸ್ಟ್ ಗೆ ಮೃತದೇಹವನ್ನು ಒಪ್ಪಿಸಿದ ಸಿರೀಷಾ , ಅಂತ್ಯ ಸಂಸ್ಕಾರಕ್ಕೂ ಸಹಾಯಮಾಡಿದ್ದಾರೆ.

ಸಿರೀಷಾ ಅವರ ಮಾನವೀಯ ನಡೆಗೆ ಡಿಜಿಪಿ ಗೌತಂ ಸವಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಪೊಲೀಸ್ ಟ್ವಿಟರ್ ಹ್ಯಾಂಡ್ಲ್ ಟ್ವೀಟ್ ಮಾಡಿದೆ.

ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ‘ಕನಸಿನ ರಾಣೆಬೆನ್ನೂರು’ ತಂಡ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ