AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು
ಗ್ರೇಟಾ ಥನ್​ಬರ್ಗ್
ರಾಜೇಶ್ ದುಗ್ಗುಮನೆ
|

Updated on:Feb 04, 2021 | 5:11 PM

Share

ದೆಹಲಿ: ಕಳೆದ ಕೆಲ ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್​​ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಗಡಿ ಭಾಗದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರ ದೇಶಮಟ್ಟದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆ ಆಗಿತ್ತು. ಈಗ ರೈತರ ಪ್ರತಿಭಟನೆ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗುತ್ತಿದೆ.

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು. ಈ ಮೂಲಕ ರೈತರ ಪ್ರತಿಭಟನೆ ವಿಚಾರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುವಂತೆ ಮಾಡಿದ್ದರು. ಅಲ್ಲದೆ, ಗ್ರೇಟಾ ಥುನ್​ಬರ್ಗ್​ ಮಾಡಿದ ಟ್ವೀಟ್​ ಕೇಂದ್ರ ಸರ್ಕಾರಕ್ಕೆ ಇರಿಸುಮುರಿಸು ತಂದಿಟ್ಟಿತ್ತು. ಈ ಬೆನ್ನಲ್ಲೇ ಈಗ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಇನ್ನು, ಗ್ರೇಟಾ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯ, ಕೆಲವು ಪಟ್ಟಭದ್ರ ಗುಂಪುಗಳು ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯುತ್ತಿರುವುದು ದುರದೃಷ್ಟಕರ ಎಂದು ಹೇಳಿತ್ತು.

ನಾನು ಈಗಲೂ ಭಾರತದ ರೈತರ ಪರ ಇದ್ದೇನೆ:

ಅಂತಾರಾಷ್ಟ್ರೀಯ ಪಿತೂರಿ ಆರೋಪ ಹಿನ್ನೆಲೆಯಲ್ಲಿ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಉತ್ತರಿಸಿರುವ ಗ್ರೇಟಾ, ಈಗಲೂ ನಾನು ಭಾರತೀಯ ರೈತರ ಪರವಿದ್ದೇನೆ. ಬೆದರಿಕೆಗಳಿಂದ ನನ್ನ ನಿರ್ಧಾರ ಬದಲಿಸಲು ಆಗುವುದಿಲ್ಲ ಎಂದು ಟ್ವೀಟ್​ ಮಾಡಿ ಟ್ವೀಟ್‌ ಮಾಡಿ ಸಮರ್ಥನೆ ನೀಡಿದ್ದಾರೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 4:12 pm, Thu, 4 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!