AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು
ಗ್ರೇಟಾ ಥನ್​ಬರ್ಗ್
ರಾಜೇಶ್ ದುಗ್ಗುಮನೆ
|

Updated on:Feb 04, 2021 | 5:11 PM

Share

ದೆಹಲಿ: ಕಳೆದ ಕೆಲ ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್​​ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಗಡಿ ಭಾಗದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರ ದೇಶಮಟ್ಟದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆ ಆಗಿತ್ತು. ಈಗ ರೈತರ ಪ್ರತಿಭಟನೆ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗುತ್ತಿದೆ.

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು. ಈ ಮೂಲಕ ರೈತರ ಪ್ರತಿಭಟನೆ ವಿಚಾರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುವಂತೆ ಮಾಡಿದ್ದರು. ಅಲ್ಲದೆ, ಗ್ರೇಟಾ ಥುನ್​ಬರ್ಗ್​ ಮಾಡಿದ ಟ್ವೀಟ್​ ಕೇಂದ್ರ ಸರ್ಕಾರಕ್ಕೆ ಇರಿಸುಮುರಿಸು ತಂದಿಟ್ಟಿತ್ತು. ಈ ಬೆನ್ನಲ್ಲೇ ಈಗ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಇನ್ನು, ಗ್ರೇಟಾ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯ, ಕೆಲವು ಪಟ್ಟಭದ್ರ ಗುಂಪುಗಳು ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯುತ್ತಿರುವುದು ದುರದೃಷ್ಟಕರ ಎಂದು ಹೇಳಿತ್ತು.

ನಾನು ಈಗಲೂ ಭಾರತದ ರೈತರ ಪರ ಇದ್ದೇನೆ:

ಅಂತಾರಾಷ್ಟ್ರೀಯ ಪಿತೂರಿ ಆರೋಪ ಹಿನ್ನೆಲೆಯಲ್ಲಿ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಉತ್ತರಿಸಿರುವ ಗ್ರೇಟಾ, ಈಗಲೂ ನಾನು ಭಾರತೀಯ ರೈತರ ಪರವಿದ್ದೇನೆ. ಬೆದರಿಕೆಗಳಿಂದ ನನ್ನ ನಿರ್ಧಾರ ಬದಲಿಸಲು ಆಗುವುದಿಲ್ಲ ಎಂದು ಟ್ವೀಟ್​ ಮಾಡಿ ಟ್ವೀಟ್‌ ಮಾಡಿ ಸಮರ್ಥನೆ ನೀಡಿದ್ದಾರೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 4:12 pm, Thu, 4 February 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ