AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಗ್ರೇಟಾ ಥುನ್​ಬರ್ಗ್​​ ವಿರುದ್ಧ FIR ದಾಖಲಿಸಿದ​ ದೆಹಲಿ ಪೊಲೀಸರು
ಗ್ರೇಟಾ ಥನ್​ಬರ್ಗ್
ರಾಜೇಶ್ ದುಗ್ಗುಮನೆ
|

Updated on:Feb 04, 2021 | 5:11 PM

Share

ದೆಹಲಿ: ಕಳೆದ ಕೆಲ ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್​​ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಗಡಿ ಭಾಗದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರ ದೇಶಮಟ್ಟದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆ ಆಗಿತ್ತು. ಈಗ ರೈತರ ಪ್ರತಿಭಟನೆ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗುತ್ತಿದೆ.

ರೈತರ ಪ್ರತಿಭಟನೆ ಬಗ್ಗೆ ಟ್ವೀಟ್​ ಮಾಡಿದ ಗ್ರೇಟಾ ಥುನ್​ಬರ್ಗ್ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಬರೆದುಕೊಂಡಿದ್ದರು. ಈ ಮೂಲಕ ರೈತರ ಪ್ರತಿಭಟನೆ ವಿಚಾರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುವಂತೆ ಮಾಡಿದ್ದರು. ಅಲ್ಲದೆ, ಗ್ರೇಟಾ ಥುನ್​ಬರ್ಗ್​ ಮಾಡಿದ ಟ್ವೀಟ್​ ಕೇಂದ್ರ ಸರ್ಕಾರಕ್ಕೆ ಇರಿಸುಮುರಿಸು ತಂದಿಟ್ಟಿತ್ತು. ಈ ಬೆನ್ನಲ್ಲೇ ಈಗ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಇನ್ನು, ಗ್ರೇಟಾ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯ, ಕೆಲವು ಪಟ್ಟಭದ್ರ ಗುಂಪುಗಳು ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯುತ್ತಿರುವುದು ದುರದೃಷ್ಟಕರ ಎಂದು ಹೇಳಿತ್ತು.

ನಾನು ಈಗಲೂ ಭಾರತದ ರೈತರ ಪರ ಇದ್ದೇನೆ:

ಅಂತಾರಾಷ್ಟ್ರೀಯ ಪಿತೂರಿ ಆರೋಪ ಹಿನ್ನೆಲೆಯಲ್ಲಿ ಗ್ರೇಟಾ ವಿರುದ್ಧ ಎಫ್​ಐಆರ್​ ದಾಖಲಾದ ಬೆನ್ನಲ್ಲೇ ಉತ್ತರಿಸಿರುವ ಗ್ರೇಟಾ, ಈಗಲೂ ನಾನು ಭಾರತೀಯ ರೈತರ ಪರವಿದ್ದೇನೆ. ಬೆದರಿಕೆಗಳಿಂದ ನನ್ನ ನಿರ್ಧಾರ ಬದಲಿಸಲು ಆಗುವುದಿಲ್ಲ ಎಂದು ಟ್ವೀಟ್​ ಮಾಡಿ ಟ್ವೀಟ್‌ ಮಾಡಿ ಸಮರ್ಥನೆ ನೀಡಿದ್ದಾರೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 4:12 pm, Thu, 4 February 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ