AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ

ಅನುಮತಿ ನಿರಾಕರಿಸಲಾದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ
ಪೊಲೀಸ್ ಬ್ಯಾರಿಕೇಡ್​ಗಳು ಧ್ವಂಸವಾದವು.
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 26, 2021 | 5:17 PM

Share

ದೆಹಲಿ: ನಾವು ಶಾಂತಿ ಪ್ರಿಯರು. ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರಕ್ಕೆ ತಿರುಗದಂತೆ ನೋಡಿಕೊಳ್ಳುತ್ತೇವೆ ಎಂದು ರೈತ ಸಂಘಟನೆಗಳು ಹೇಳಿದ್ದವು. ಆದರೆ, ಇಂದು ಎಲ್ಲವೂ ತಲೆಕೆಳಗಾಗಿದೆ. ಈ ಸಂಬಂಧ ಸಂಯುಕ್ತ ಕಿಸಾನ್​ ಮೋರ್ಚಾ ಪ್ರತಿಕ್ರಿಯೆ ನೀಡಿದ್ದು, ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ ಎಂದು ಬೇಸರ ಹೊರ ಹಾಕಿದೆ.

ಟ್ರ್ಯಾಕ್ಟರ್​ ರ‍್ಯಾಲಿಗೂ ಮುನ್ನ ಮಾತನಾಡಿದ್ದ ರೈತ ಸಂಘಟನೆಗಳು ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿತ್ತು. ಆದರೆ, ಇಂದು ಆಗಿದ್ದೇ ಬೇರೆ. ಒಪ್ಪಿಗೆ ಇಲ್ಲದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಪ್ರತಿಭಟನಾ ನಿರತ ಸಂಯುಕ್ತ ಕಿಸಾನ್​ ಮೋರ್ಚಾ, ನಮ್ಮೆಲ್ಲ ಪ್ರಯತ್ನದ ಹೊರತಾಗಿಯೂ ಕೆಲ ಸಂಘಟನೆಗಳ ನಾಯಕರು ಮತ್ತು ಸದಸ್ಯರು ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ. ಸಮಾಜ ವಿರೋಧಿ ಶಕ್ತಿಗಳು ನಮ್ಮ ಪ್ರತಿಭಟನೆಯಲ್ಲಿ ನುಸುಳಿದ್ದವು. ಇಲ್ಲದಿದ್ದರೆ ನಮ್ಮ ಚಳುವಳಿ ಶಾಂತಿಯುತವಾಗಿಯೇ ಇರುತ್ತಿತ್ತು. ಶಾಂತಿ ನಮ್ಮ ದೊಡ್ಡ ಶಕ್ತಿ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ. ಈ ರೀತಿಯ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂರು ಬಾರಿ ಹಾರಿದ ಬಾವುಟ ಕೆಂಪುಕೋಟೆ ಧ್ವಜಸ್ಥಂಬದ ಮೇಲೆ ಮಧ್ಯಾಹ್ನ ಸಿಖ್​ ಹಾಗೂ ರೈತ ಧ್ವಜ ಹಾರಿಸಲಾಗಿತ್ತು. ಇದಾದ ಬೆನ್ನಲ್ಲೇ, ಗುಮ್ಮಟದ ಮೇಲೆ ರೈತರ ಧ್ವಜ ಹಾರಾಡಿತ್ತು. ನಂತರ ಮಾತನಾಡಿದ್ದ ರೈತ ನಾಯಕರು, ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗುತ್ತೇವೆ ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

ಹೇಳಿಕೆ ನೀಡಿದ ನಂತರ ಅಚ್ಚರಿ ಎಂಬಂತೆ ರೈತರು ಗುಮ್ಮಟದ ಕೆಳಭಾಗದಲ್ಲಿ ಮತ್ತೊಮ್ಮೆ ಬಾವುಟ ಹಾರಿಸಿದ್ದಾರೆ. ಪ್ರತಿಭಟನೆ ಕಾವು ತಣಿಯದ ಕಾರಣ, ಸನ್ನದ್ಧ ಸ್ಥಿತಿಯಲ್ಲಿರುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ನೀಡಿದೆ. ಪರಿಸ್ಥಿತಿ ಕೈಮೀರಿದರೆ ಹೆಚ್ಚುವರಿ ಭದ್ರತೆ ಒದಗಿಸಲು ಸರ್ಕಾರ ಈ ಸಿದ್ಧತೆ ಮಾಡಿಕೊಂಡಿದೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ