AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ

ಅನುಮತಿ ನಿರಾಕರಿಸಲಾದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ
ಪೊಲೀಸ್ ಬ್ಯಾರಿಕೇಡ್​ಗಳು ಧ್ವಂಸವಾದವು.
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 26, 2021 | 5:17 PM

ದೆಹಲಿ: ನಾವು ಶಾಂತಿ ಪ್ರಿಯರು. ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರಕ್ಕೆ ತಿರುಗದಂತೆ ನೋಡಿಕೊಳ್ಳುತ್ತೇವೆ ಎಂದು ರೈತ ಸಂಘಟನೆಗಳು ಹೇಳಿದ್ದವು. ಆದರೆ, ಇಂದು ಎಲ್ಲವೂ ತಲೆಕೆಳಗಾಗಿದೆ. ಈ ಸಂಬಂಧ ಸಂಯುಕ್ತ ಕಿಸಾನ್​ ಮೋರ್ಚಾ ಪ್ರತಿಕ್ರಿಯೆ ನೀಡಿದ್ದು, ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ ಎಂದು ಬೇಸರ ಹೊರ ಹಾಕಿದೆ.

ಟ್ರ್ಯಾಕ್ಟರ್​ ರ‍್ಯಾಲಿಗೂ ಮುನ್ನ ಮಾತನಾಡಿದ್ದ ರೈತ ಸಂಘಟನೆಗಳು ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿತ್ತು. ಆದರೆ, ಇಂದು ಆಗಿದ್ದೇ ಬೇರೆ. ಒಪ್ಪಿಗೆ ಇಲ್ಲದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಪ್ರತಿಭಟನಾ ನಿರತ ಸಂಯುಕ್ತ ಕಿಸಾನ್​ ಮೋರ್ಚಾ, ನಮ್ಮೆಲ್ಲ ಪ್ರಯತ್ನದ ಹೊರತಾಗಿಯೂ ಕೆಲ ಸಂಘಟನೆಗಳ ನಾಯಕರು ಮತ್ತು ಸದಸ್ಯರು ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ. ಸಮಾಜ ವಿರೋಧಿ ಶಕ್ತಿಗಳು ನಮ್ಮ ಪ್ರತಿಭಟನೆಯಲ್ಲಿ ನುಸುಳಿದ್ದವು. ಇಲ್ಲದಿದ್ದರೆ ನಮ್ಮ ಚಳುವಳಿ ಶಾಂತಿಯುತವಾಗಿಯೇ ಇರುತ್ತಿತ್ತು. ಶಾಂತಿ ನಮ್ಮ ದೊಡ್ಡ ಶಕ್ತಿ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ. ಈ ರೀತಿಯ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂರು ಬಾರಿ ಹಾರಿದ ಬಾವುಟ ಕೆಂಪುಕೋಟೆ ಧ್ವಜಸ್ಥಂಬದ ಮೇಲೆ ಮಧ್ಯಾಹ್ನ ಸಿಖ್​ ಹಾಗೂ ರೈತ ಧ್ವಜ ಹಾರಿಸಲಾಗಿತ್ತು. ಇದಾದ ಬೆನ್ನಲ್ಲೇ, ಗುಮ್ಮಟದ ಮೇಲೆ ರೈತರ ಧ್ವಜ ಹಾರಾಡಿತ್ತು. ನಂತರ ಮಾತನಾಡಿದ್ದ ರೈತ ನಾಯಕರು, ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗುತ್ತೇವೆ ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

ಹೇಳಿಕೆ ನೀಡಿದ ನಂತರ ಅಚ್ಚರಿ ಎಂಬಂತೆ ರೈತರು ಗುಮ್ಮಟದ ಕೆಳಭಾಗದಲ್ಲಿ ಮತ್ತೊಮ್ಮೆ ಬಾವುಟ ಹಾರಿಸಿದ್ದಾರೆ. ಪ್ರತಿಭಟನೆ ಕಾವು ತಣಿಯದ ಕಾರಣ, ಸನ್ನದ್ಧ ಸ್ಥಿತಿಯಲ್ಲಿರುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ನೀಡಿದೆ. ಪರಿಸ್ಥಿತಿ ಕೈಮೀರಿದರೆ ಹೆಚ್ಚುವರಿ ಭದ್ರತೆ ಒದಗಿಸಲು ಸರ್ಕಾರ ಈ ಸಿದ್ಧತೆ ಮಾಡಿಕೊಂಡಿದೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ