AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ

ಅನುಮತಿ ನಿರಾಕರಿಸಲಾದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ: ಸಂಯುಕ್ತ ಕಿಸಾನ್​ ಮೋರ್ಚಾ ಬೇಸರ
ಪೊಲೀಸ್ ಬ್ಯಾರಿಕೇಡ್​ಗಳು ಧ್ವಂಸವಾದವು.
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 5:17 PM

Share

ದೆಹಲಿ: ನಾವು ಶಾಂತಿ ಪ್ರಿಯರು. ಯಾವುದೇ ಕಾರಣಕ್ಕೂ ಗಣರಾಜ್ಯೋತ್ಸವದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರಕ್ಕೆ ತಿರುಗದಂತೆ ನೋಡಿಕೊಳ್ಳುತ್ತೇವೆ ಎಂದು ರೈತ ಸಂಘಟನೆಗಳು ಹೇಳಿದ್ದವು. ಆದರೆ, ಇಂದು ಎಲ್ಲವೂ ತಲೆಕೆಳಗಾಗಿದೆ. ಈ ಸಂಬಂಧ ಸಂಯುಕ್ತ ಕಿಸಾನ್​ ಮೋರ್ಚಾ ಪ್ರತಿಕ್ರಿಯೆ ನೀಡಿದ್ದು, ಕೆಲ ಸಂಘಟನೆಗಳು ನಿಯಮ ಮೀರಿ ನಡೆದುಕೊಂಡಿವೆ ಎಂದು ಬೇಸರ ಹೊರ ಹಾಕಿದೆ.

ಟ್ರ್ಯಾಕ್ಟರ್​ ರ‍್ಯಾಲಿಗೂ ಮುನ್ನ ಮಾತನಾಡಿದ್ದ ರೈತ ಸಂಘಟನೆಗಳು ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿತ್ತು. ಆದರೆ, ಇಂದು ಆಗಿದ್ದೇ ಬೇರೆ. ಒಪ್ಪಿಗೆ ಇಲ್ಲದ ಪ್ರದೇಶಗಳಲ್ಲೂ ಟ್ರ್ಯಾಕ್ಟರ್​ಗಳು ಸಂಚಾರ ನಡೆಸಿದ್ದವು. ಕೆಂಪುಕೋಟೆ ಒಳಗೆ ನುಗ್ಗಿದ್ದ ರೈತರು, ಮೂರು ಬಾರಿ ಬಾವುಟ ಹಾರಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಪ್ರತಿಭಟನಾ ನಿರತ ಸಂಯುಕ್ತ ಕಿಸಾನ್​ ಮೋರ್ಚಾ, ನಮ್ಮೆಲ್ಲ ಪ್ರಯತ್ನದ ಹೊರತಾಗಿಯೂ ಕೆಲ ಸಂಘಟನೆಗಳ ನಾಯಕರು ಮತ್ತು ಸದಸ್ಯರು ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ. ಸಮಾಜ ವಿರೋಧಿ ಶಕ್ತಿಗಳು ನಮ್ಮ ಪ್ರತಿಭಟನೆಯಲ್ಲಿ ನುಸುಳಿದ್ದವು. ಇಲ್ಲದಿದ್ದರೆ ನಮ್ಮ ಚಳುವಳಿ ಶಾಂತಿಯುತವಾಗಿಯೇ ಇರುತ್ತಿತ್ತು. ಶಾಂತಿ ನಮ್ಮ ದೊಡ್ಡ ಶಕ್ತಿ ಎಂದು ನಾವು ಯಾವಾಗಲೂ ಭಾವಿಸಿದ್ದೇವೆ. ಈ ರೀತಿಯ ಉಲ್ಲಂಘನೆಯು ಚಳವಳಿಗೆ ನೋವುಂಟು ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂರು ಬಾರಿ ಹಾರಿದ ಬಾವುಟ ಕೆಂಪುಕೋಟೆ ಧ್ವಜಸ್ಥಂಬದ ಮೇಲೆ ಮಧ್ಯಾಹ್ನ ಸಿಖ್​ ಹಾಗೂ ರೈತ ಧ್ವಜ ಹಾರಿಸಲಾಗಿತ್ತು. ಇದಾದ ಬೆನ್ನಲ್ಲೇ, ಗುಮ್ಮಟದ ಮೇಲೆ ರೈತರ ಧ್ವಜ ಹಾರಾಡಿತ್ತು. ನಂತರ ಮಾತನಾಡಿದ್ದ ರೈತ ನಾಯಕರು, ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗುತ್ತೇವೆ ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

ಹೇಳಿಕೆ ನೀಡಿದ ನಂತರ ಅಚ್ಚರಿ ಎಂಬಂತೆ ರೈತರು ಗುಮ್ಮಟದ ಕೆಳಭಾಗದಲ್ಲಿ ಮತ್ತೊಮ್ಮೆ ಬಾವುಟ ಹಾರಿಸಿದ್ದಾರೆ. ಪ್ರತಿಭಟನೆ ಕಾವು ತಣಿಯದ ಕಾರಣ, ಸನ್ನದ್ಧ ಸ್ಥಿತಿಯಲ್ಲಿರುವಂತೆ ಭದ್ರತಾ ಪಡೆಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ನೀಡಿದೆ. ಪರಿಸ್ಥಿತಿ ಕೈಮೀರಿದರೆ ಹೆಚ್ಚುವರಿ ಭದ್ರತೆ ಒದಗಿಸಲು ಸರ್ಕಾರ ಈ ಸಿದ್ಧತೆ ಮಾಡಿಕೊಂಡಿದೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ