AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ದೆಹಲಿಯತ್ತ ಪ್ರಯಾಣ ಬೆಳೆಸಿದ ಆಲ್ ಇಂಡಿಯಾ ಕಿಸಾನ್ ಸಭಾ ಕಾರ್ಯಕರ್ತರು

ಸುಮಾರು 15,000 ರೈತರು ನಿನ್ನೆಯೇ ನಾಸಿಕ್​ನಿಂದ ಮುಂಬೈಗೆ ವಾಹನದ ಮೂಲಕ ಪ್ರಯಾಣ ಆರಂಭಿಸಿದ್ದರು. ಗಾಲ್ಫ್ ಕ್ಲಬ್ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ಪ್ರಯಾಣದಲ್ಲಿ ನೂರಾರು ಟೆಂಪೋ ಹಾಗೂ ಇತರ ವಾಹನಗಳು ಭಾಗವಹಿಸಿವೆ.

Delhi Chalo | ದೆಹಲಿಯತ್ತ ಪ್ರಯಾಣ ಬೆಳೆಸಿದ ಆಲ್ ಇಂಡಿಯಾ ಕಿಸಾನ್ ಸಭಾ ಕಾರ್ಯಕರ್ತರು
ಆಲ್ ಇಂಡಿಯಾ ಕಿಸಾನ್ ಸಭಾ ಕಾರ್ಯಕರ್ತರ ಪಾದಯಾತ್ರೆ
TV9 Web
| Updated By: ganapathi bhat|

Updated on:Apr 06, 2022 | 8:44 PM

Share

ಮುಂಬೈ: ಮಹಾರಾಷ್ಟ್ರ ನಾಸಿಕ್​ನ, ಆಲ್ ಇಂಡಿಯಾ ಕಿಸಾನ್ ಸಭಾ ಮತ್ತು ವಿವಿಧ ರೈತ ಸಂಘಟನೆಗಳ ಕಾರ್ಯಕರ್ತರು ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಾಗಿ ಇಂದು (ಭಾನುವಾರ) ಮುಂಬೈಯತ್ತ ಹೆಜ್ಜೆ ಹಾಕಿದ್ದಾರೆ.

ರೈತ ಪರ ಚಳುವಳಿಯ ಪತಾಕೆಗಳು, ಬ್ಯಾನರ್​ಗಳನ್ನು ಹಿಡಿದಿರುವ ಜನರು, ನಾಸಿಕ್​ದಿಂದ ಮುಂಬೈಗೆ ಸುಮಾರು 180 ಕಿಲೋ ಮೀಟರ್​ಗಳ ದೂರವನ್ನು ಕ್ರಮಿಸಲು, ಸಾಗರೋಪಾದಿಯಲ್ಲಿ ನಡೆಯುತ್ತಿದ್ದಾರೆ. ಈಗ ಮುಂಬೈಗೆ ಹೊರಟಿರುವ ರೈತರು ಬಳಿಕ ಅಲ್ಲಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಆ ಮೂಲಕ, ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಬಲ ತುಂಬಲಿದ್ದಾರೆ.

ಸುಮಾರು 15,000 ರೈತರು ನಿನ್ನೆಯೇ ನಾಸಿಕ್​ನಿಂದ ಮುಂಬೈಗೆ ವಾಹನದ ಮೂಲಕ ಪ್ರಯಾಣ ಆರಂಭಿಸಿದ್ದರು. ಗಾಲ್ಫ್ ಕ್ಲಬ್ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ಪ್ರಯಾಣದಲ್ಲಿ ನೂರಾರು ಟೆಂಪೋ ಹಾಗೂ ಇತರ ವಾಹನಗಳು ಭಾಗವಹಿಸಿವೆ.

ಕೇಂದ್ರದ ಹೊಸ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿದೆ. ನಾವು ಅದನ್ನು ವಿರೋಧಿಸಲು ಈಗ ಮುಂಬೈ ತಲುಪಬೇಕಿದೆ. ಬಳಿಕ, ಜನವರಿ 26ಕ್ಕೆ ದೆಹಲಿ ತಲುಪುವಂತೆ ಮುಂಬೈನಿಂದ ಹೊರಡಲಿದ್ದೇವೆ. ಮಹಾರಾಷ್ಟ್ರದ ಸುಮಾರು 23 ಜಿಲ್ಲೆಗಳ ರೈತಪ್ರತಿನಿಧಿಗಳು ಈ ಚಳುವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನಾಸಿಕ್​ನಿಂದ ಪ್ರಯಾಣ ಬೆಳೆಸಿರುವ ರೈತರೊಬ್ಬರು ANI ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಆಜಾದ್ ಮೈದಾನದಲ್ಲಿ ನಡೆಯಲಿರುವ ರೈತಪ್ರತಿನಿಧಿಗಳ ರ್‍ಯಾಲಿಯಲ್ಲಿ ಚಳುವಳಿಗಾರರು ಭಾಗವಹಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಆ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನವರಿ 26ರಂದು ನಡೆಯಲಿರುವ ‘ಕಿಸಾನ್ ಗಣತಂತ್ರ ಪರೇಡ್’ ಸಮಾರಂಭಕ್ಕೆ ದೇಶದ ವಿವಿಧ ಭಾಗಗಳಿಂದ ರೈತರು ಆಗಮಿಸಲಿದ್ದಾರೆ. ಪಂಜಾಬ್, ಹರ್ಯಾಣ, ರಾಜಸ್ಥಾನ ಭಾಗದ ರೈತರು ಈಗಾಗಲೇ ಟಿಕ್ರಿ ಗಡಿಭಾಗ ತಲುಪಿದ್ದಾರೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್​ದಿಂದ ಸುಮಾರು 25,000 ಟ್ರಾಕ್ಟರ್​ಗಳು ಕಿಸಾನ್ ಪರೇಡ್​ನಲ್ಲಿ ಭಾಗವಹಿಸಲಿರುವ ಬಗ್ಗೆ ಭಾರತೀಯ ಕಿಸಾನ್ ಯೂನಿಯನ್ (BKU) ನಾಯಕ ರಾಕೇಶ್ ಟಿಕಾಯತ್ ಮಾಹಿತಿ ನೀಡಿದ್ದಾರೆ.

ರೈತರ ಅಹವಾಲು ಆಲಿಸಲು ನೇಮಿಸಿದ್ದ ಸಮಿತಿಗೆ ಅವಹೇಳನ: ಸುಪ್ರೀಂಕೋರ್ಟ್​ ಕೆಂಡಾಮಂಡಲ

Published On - 6:50 pm, Sun, 24 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ