AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್