Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
Follow us
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 1:39 PM

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ