AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್