AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!