AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?