AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ