AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಸೀಮೆಎಣ್ಣೆ ಸಬ್ಸಿಡಿ ರದ್ದು; ಕೇಂದ್ರ ಬಜೆಟ್ ಘೋಷಣೆ
ಸೀಮೆಎಣ್ಣೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 03, 2021 | 1:39 PM

Share

ನವದೆಹಲಿ: ಬಡವರ ಇಂಧನ ಎಂದೇ ಕರೆಯಲ್ಪಡುವ ಸೀಮೆಎಣ್ಣೆ ದರವನ್ನು ಸ್ವಲ್ಪ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಈಗ ಸಬ್ಸಿಡಿಯನ್ನು ರದ್ದು ಮಾಡಿದೆ. ಇನ್ನು ಮುಂದೆ ಸಾರ್ವಜನಿಕ ವಿತರಣೆ ಕೇಂದ್ರದಲ್ಲಿ ಸೀಮೆಎಣ್ಣೆ ಖರೀದಿಸಲು ಮಾರುಕಟ್ಟೆಯ ಬೆಲೆಯನ್ನೇ ಗ್ರಾಹಕರು ತೆರಬೇಕಿದೆ.

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, 2021-22ರ ಕೇಂದ್ರ ಬಜೆಟ್​ನಲ್ಲಿ ಏಪ್ರಿಲ್​ನಿಂದ ಪ್ರಾರಂಭವಾಗುವ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಯಾವುದೇ ಅವಕಾಶವನ್ನು ನೀಡುವುದಿಲ್ಲ ಎಂದಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ ₹2,677.32 ಕೋಟಿ ಆಗಿತ್ತು. ಹಿಂದಿನ ಹಣಕಾಸು ವರ್ಷದಲ್ಲಿ ₹4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೊರೆ ಕಡಿಮೆ ಮಾಡಲು 2016ರಲ್ಲಿ ಕೇಂದ್ರ ಸರ್ಕಾರವು ಸರ್ಕಾರದ ಒಡೆತನದಲ್ಲಿರುವ ತೈಲ ವಿತರಣಾ ಕಂಪನಿಗಳಿಗೆ 15 ದಿನಗಳಿಗೊಮ್ಮೆ ಲೀಟರ್​ಗೆ 25 ಪೈಸೆ ಏರಿಕೆ ಮಾಡಲು ಅನುಮತಿ ನೀಡಿತ್ತು ಎಂದು ತೈಲೋದ್ಯಮದಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳ ಮೂಲಗಳು ಹೇಳಿವೆ.

ಇತ್ತ ಸಾರ್ವಜನಿಕ ವಿತರಣಾ ಕೇಂದ್ರಗಳು ಸೀಮೆಎಣ್ಣೆ ಬೆಲೆಯನ್ನು ಪರಿಷ್ಕರಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಗ್ರಾಹಕರಿಗೆ  ನೀಡಲಿವೆ.

ಮೇ 2020ರಲ್ಲಿ ಲೀಟರ್​ಗೆ ₹13.96 ಇದ್ದ ಸೀಮೆಎಣ್ಣೆ ಈಗ ₹30.12ಕ್ಕೇರಿದೆ. ಜನವರಿಯಲ್ಲಿ ಲೀಟರ್ ಸೀಮೆಎಣ್ಣೆಗೆ ₹3.87 ಪೈಸೆ ಏರಿಕೆ ಆಗಿತ್ತು.

ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

Published On - 1:13 pm, Wed, 3 February 21

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ