AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ.. : ಬಾಂಬೆ ಹೈಕೋರ್ಟ್ ತೀರ್ಪು

ಆರೋಪಿಯು ಬಾಲಕಿಯ ಸ್ತನವನ್ನು ಸ್ಪರ್ಶಿಸುವಾಗ ಆಕೆಯ ಬಟ್ಟೆಯನ್ನು ತೆಗೆಯಲಿಲ್ಲ. ನೇರವಾಗಿ ದೈಹಿಕ ಸಂಪರ್ಕ ಹೊಂದಲಿಲ್ಲ. ಹಾಗಾಗಿ ಈ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ.. : ಬಾಂಬೆ ಹೈಕೋರ್ಟ್ ತೀರ್ಪು
ಬಾಂಬೆ ಹೈಕೋರ್ಟ್​
Lakshmi Hegde
| Edited By: |

Updated on: Jan 24, 2021 | 5:59 PM

Share

ಮುಂಬೈ: ಕೇವಲ ದೇಹವನ್ನು ತಡವುವುದು, ಸವರುವುದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ. ಲೈಂಗಿಕ ಉದ್ದೇಶವನ್ನಿಟ್ಟುಕೊಂಡು ನೇರವಾಗಿ ದೇಹಸಂಪರ್ಕ ಮಾಡುವುದು, ಚರ್ಮದಿಂದ ಚರ್ಮಕ್ಕೆ ಸ್ಪರ್ಶಿಸುವುದು ಲೈಂಗಿಕ ದೌರ್ಜನ್ಯ ಎಂದು ಇತ್ತೀಚೆಗಷ್ಟೇ ಬಾಂಬೆ ಹೈಕೋರ್ಟ್​ನ ನಾಗ್ಪುರ ಪೀಠ​ ತೀರ್ಪು ನೀಡಿದೆ.

ಒಬ್ಬ ಅಪ್ರಾಪ್ತೆ ಬಟ್ಟೆ ಧರಿಸಿಕೊಂಡಿದ್ದಾಗ ಆಕೆಯ ಎದೆಯನ್ನು ಯಾರಾದರೂ ಮುಟ್ಟಿದರೆ ಅಥವಾ ಅವರ ಕೈ ಎದೆಗೆ ತಾಗಿದ ತಕ್ಷಣ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆತ ಅಪ್ರಾಪ್ತೆ ಧರಿಸಿದ್ದ ಬಟ್ಟೆಯನ್ನು ತೆಗೆದು ಸ್ಪರ್ಶಿಸಿದರೆ ಅಥವಾ ಬಟ್ಟೆಯೊಳಗಿಂದ ಕೈ ಹಾಕಿದರೆ ಅದನ್ನು ಲೈಂಗಿಕ ದೌರ್ಜನ್ಯ ಎನ್ನುವುದು ಸರಿ ಎಂದೂ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿ, ಜೈಲುಪಾಲಾಗಿದ್ದ ಆರೋಪಿಯ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಪುಷ್ಪಾ ಗನೇಡಿವಾಲಾ ಹೀಗೆ ತೀರ್ಪು ಪ್ರಕಟಿಸಿದ್ದಾರೆ.

ಅಪ್ರಾಪ್ತೆ ಜತೆ ಬಲವಂತವಾಗಿ ಸಂಭೋಗ ನಡೆಸುವುದು, ಆಕೆಯ ಖಾಸಗಿ ಅಂಗಗಳನ್ನು ಲೈಂಗಿಕ ಉದ್ದೇಶದಿಂದ ಸ್ಪರ್ಶಿಸುವುದು ಮತ್ತು ಅಪ್ರಾಪ್ತೆಯಿಂದ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗಗಳನ್ನು ಸ್ಪರ್ಶಿಸಿಕೊಳ್ಳುವುದು POCSOಕಾಯ್ದೆಯಡಿ ಅಪರಾಧ ಎನಿಸಿಕೊಳ್ಳುತ್ತದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ ನ್ಯಾಯಾಧೀಶೆ ಪುಷ್ಪಾ, ಪ್ರಸ್ತುತ ಪ್ರಕರಣ ಹೀಗಿಲ್ಲ. ಇಲ್ಲಿ ಆರೋಪಿಯು 12 ವರ್ಷದ ಬಾಲಕಿಯ ಸ್ತನವನ್ನು ಸ್ಪರ್ಶಿಸುವಾಗ ಆಕೆಯ ಬಟ್ಟೆಯನ್ನು ತೆಗೆಯಲಿಲ್ಲ. ನೇರವಾಗಿ ದೈಹಿಕ ಸಂಪರ್ಕ ಹೊಂದಲಿಲ್ಲ. ಹಾಗಾಗಿ ಈ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ. ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಕುಂದು ತರುವುದು) ಅನ್ವಯ ಆಗುತ್ತದೆ ಎಂದು ಹೇಳಿದ್ದಾರೆ.

ಈತ 12 ವರ್ಷದ ಬಾಲಕಿಯನ್ನು ಪೇರಲೆ ಹಣ್ಣಿನ ಆಮಿಷ ತೋರಿಸಿ ಈತ ಮನೆಗೆ ಕರೆದಿದ್ದ. ಕೆಲವು ಸಮಯದ ಬಳಿಕ ಆಕೆಯ ತಾಯಿ ಹುಡುಕುತ್ತ ಹೋದಾಗ ಆಕೆ ಅಳುತ್ತ ಕುಳಿತಿದ್ದಳು. ಏನಾಯಿತು ಎಂದು ಕೇಳಿದಾಗ ಆಕೆ ಎಲ್ಲವನ್ನೂ ವಿವರಿಸಿದ್ದಳು. ನಂತರ ತಾಯಿ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ದೂರು ನೀಡಿದ್ದರು. ನಂತರ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಸದ್ದಿಲ್ಲದೆ ತಯಾರಾಗುತ್ತಿದೆ ಬಿಜೆಪಿ ಪ್ರಣಾಳಿಕೆ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!