ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
Edited By:

Updated on: Jan 21, 2021 | 4:46 PM

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us