AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡುವ ಮುನ್ನ ಧ್ವಜಾರೋಹಣ ಮಾಡಲಾಯಿತು
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 26, 2021 | 8:19 PM

Share

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಧ್ವಜಾರೋಹಣ ಹಾಗೂ ಗಿಡ ನೆಡುವ ಆಂದೋಲನ ಹಮ್ಮಿಕೊಳ್ಳುವ ಮೂಲಕ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್ ಸದಸ್ಯರು ಅಯೋಧ್ಯೆಯ ಧನ್ನಿಪುರ್​ ಗ್ರಾಮದ ಐದು ಎಕರೆ ಜಾಗದಲ್ಲಿ ಬೆಳಗ್ಗೆ 8:15ಕ್ಕೆ ಧ್ವಜಾರೋಹಣ ಮಾಡಿದರು. ಐಐಸಿಎಫ್ ಮಸೀದಿ ನಿರ್ಮಾಣದ ಜವಾಬ್ದಾರಿ ತೆಗೆದುಕೊಂಡಿದೆ. ಈ ಜಾಗ ರಾಮ ಜನ್ಮಭೂಮಿಯಿಂದ 25 ಕಿ.ಮೀ ದೂರದಲ್ಲಿದೆ.

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ. ಇದಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಕಳೆದ ತಿಂಗಳು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಮಸೀದಿಯ ನೀಲ ನಕ್ಷೆಯನ್ನು ಬಿಡುಗಡೆ ಮಾಡಿತ್ತು. ಈ ಮಸೀದಿಗೆ ಏನು ಹೆಸರಿಡಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಮಸೀದಿಗೆ ಯಾವುದೇ ರಾಜನ ಹೆಸರು ಇಡುವುದಿಲ್ಲ ಎಂಬದಷ್ಟೇ ನಾವು ನಿರ್ಧರಿಸಿದ್ದೇವೆ ಎಂದು ಟ್ರಸ್ಟ್​ನವರು ಹೇಳಿದ್ದರು.

2019ರಲ್ಲಿ ರಾಮ ಜನ್ಮಭೂಮಿ ತೀರ್ಪನ್ನು ಸುಪ್ರೀಂಕೋರ್ಟ್​ ನೀಡಿತ್ತು. ಈ ತೀರ್ಪಿನಲ್ಲಿ ವಿವಾದಿತ ಜಾಗವನ್ನು ರಾಮ ಮಂದಿರಕ್ಕೆ ನೀಡಿದರೆ, ಮಸೀದಿ ಕಟ್ಟಲು ಐದು ಎಕರೆ ಜಾಗವನ್ನು ಅಯೋಧ್ಯೆಯಲ್ಲೇ ಪ್ರತ್ಯೇಕವಾಗಿ ನೀಡಲಾಗಿದೆ.

ಅಯೋಧ್ಯೆಯಲ್ಲಿ ದಿವ್ಯ-ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಟಿವಿ 9 ಪ್ರಮೋಟರ್ಸ್​ ದೇಣಿಗೆ, 11 ಕೋಟಿ ರೂ ಚೆಕ್​ ಕಾಣಿಕೆ

Published On - 8:19 pm, Tue, 26 January 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು