AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡುವ ಮುನ್ನ ಧ್ವಜಾರೋಹಣ ಮಾಡಲಾಯಿತು
ರಾಜೇಶ್ ದುಗ್ಗುಮನೆ
| Edited By: |

Updated on:Jan 26, 2021 | 8:19 PM

Share

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಧ್ವಜಾರೋಹಣ ಹಾಗೂ ಗಿಡ ನೆಡುವ ಆಂದೋಲನ ಹಮ್ಮಿಕೊಳ್ಳುವ ಮೂಲಕ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್ ಸದಸ್ಯರು ಅಯೋಧ್ಯೆಯ ಧನ್ನಿಪುರ್​ ಗ್ರಾಮದ ಐದು ಎಕರೆ ಜಾಗದಲ್ಲಿ ಬೆಳಗ್ಗೆ 8:15ಕ್ಕೆ ಧ್ವಜಾರೋಹಣ ಮಾಡಿದರು. ಐಐಸಿಎಫ್ ಮಸೀದಿ ನಿರ್ಮಾಣದ ಜವಾಬ್ದಾರಿ ತೆಗೆದುಕೊಂಡಿದೆ. ಈ ಜಾಗ ರಾಮ ಜನ್ಮಭೂಮಿಯಿಂದ 25 ಕಿ.ಮೀ ದೂರದಲ್ಲಿದೆ.

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ. ಇದಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಕಳೆದ ತಿಂಗಳು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಮಸೀದಿಯ ನೀಲ ನಕ್ಷೆಯನ್ನು ಬಿಡುಗಡೆ ಮಾಡಿತ್ತು. ಈ ಮಸೀದಿಗೆ ಏನು ಹೆಸರಿಡಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಮಸೀದಿಗೆ ಯಾವುದೇ ರಾಜನ ಹೆಸರು ಇಡುವುದಿಲ್ಲ ಎಂಬದಷ್ಟೇ ನಾವು ನಿರ್ಧರಿಸಿದ್ದೇವೆ ಎಂದು ಟ್ರಸ್ಟ್​ನವರು ಹೇಳಿದ್ದರು.

2019ರಲ್ಲಿ ರಾಮ ಜನ್ಮಭೂಮಿ ತೀರ್ಪನ್ನು ಸುಪ್ರೀಂಕೋರ್ಟ್​ ನೀಡಿತ್ತು. ಈ ತೀರ್ಪಿನಲ್ಲಿ ವಿವಾದಿತ ಜಾಗವನ್ನು ರಾಮ ಮಂದಿರಕ್ಕೆ ನೀಡಿದರೆ, ಮಸೀದಿ ಕಟ್ಟಲು ಐದು ಎಕರೆ ಜಾಗವನ್ನು ಅಯೋಧ್ಯೆಯಲ್ಲೇ ಪ್ರತ್ಯೇಕವಾಗಿ ನೀಡಲಾಗಿದೆ.

ಅಯೋಧ್ಯೆಯಲ್ಲಿ ದಿವ್ಯ-ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಟಿವಿ 9 ಪ್ರಮೋಟರ್ಸ್​ ದೇಣಿಗೆ, 11 ಕೋಟಿ ರೂ ಚೆಕ್​ ಕಾಣಿಕೆ

Published On - 8:19 pm, Tue, 26 January 21

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!