ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಧ್ವಜಾರೋಹಣ ಮಾಡಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ
ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡುವ ಮುನ್ನ ಧ್ವಜಾರೋಹಣ ಮಾಡಲಾಯಿತು
Edited By:

Updated on: Jan 26, 2021 | 8:19 PM

ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಧ್ವಜಾರೋಹಣ ಹಾಗೂ ಗಿಡ ನೆಡುವ ಆಂದೋಲನ ಹಮ್ಮಿಕೊಳ್ಳುವ ಮೂಲಕ ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್ ಸದಸ್ಯರು ಅಯೋಧ್ಯೆಯ ಧನ್ನಿಪುರ್​ ಗ್ರಾಮದ ಐದು ಎಕರೆ ಜಾಗದಲ್ಲಿ ಬೆಳಗ್ಗೆ 8:15ಕ್ಕೆ ಧ್ವಜಾರೋಹಣ ಮಾಡಿದರು. ಐಐಸಿಎಫ್ ಮಸೀದಿ ನಿರ್ಮಾಣದ ಜವಾಬ್ದಾರಿ ತೆಗೆದುಕೊಂಡಿದೆ. ಈ ಜಾಗ ರಾಮ ಜನ್ಮಭೂಮಿಯಿಂದ 25 ಕಿ.ಮೀ ದೂರದಲ್ಲಿದೆ.

ಈಗ ಮಣ್ಣು ಪರೀಕ್ಷೆ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಂಡ ನಂತರ ನಾವು ಮಸೀದಿ ನಿರ್ಮಾಣ ಕಾರ್ಯ ಆರಂಭಿಸುತ್ತೇವೆ. ಇದಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತೇವೆ ಎಂದು ಟ್ರಸ್ಟ್​ ಮುಖ್ಯಸ್ಥ ಜಾಫರ್ ಅಹ್ಮದ್ ಫಾರೂಕಿ ಹೇಳಿದ್ದಾರೆ.

ಕಳೆದ ತಿಂಗಳು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಮಸೀದಿಯ ನೀಲ ನಕ್ಷೆಯನ್ನು ಬಿಡುಗಡೆ ಮಾಡಿತ್ತು. ಈ ಮಸೀದಿಗೆ ಏನು ಹೆಸರಿಡಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಮಸೀದಿಗೆ ಯಾವುದೇ ರಾಜನ ಹೆಸರು ಇಡುವುದಿಲ್ಲ ಎಂಬದಷ್ಟೇ ನಾವು ನಿರ್ಧರಿಸಿದ್ದೇವೆ ಎಂದು ಟ್ರಸ್ಟ್​ನವರು ಹೇಳಿದ್ದರು.

2019ರಲ್ಲಿ ರಾಮ ಜನ್ಮಭೂಮಿ ತೀರ್ಪನ್ನು ಸುಪ್ರೀಂಕೋರ್ಟ್​ ನೀಡಿತ್ತು. ಈ ತೀರ್ಪಿನಲ್ಲಿ ವಿವಾದಿತ ಜಾಗವನ್ನು ರಾಮ ಮಂದಿರಕ್ಕೆ ನೀಡಿದರೆ, ಮಸೀದಿ ಕಟ್ಟಲು ಐದು ಎಕರೆ ಜಾಗವನ್ನು ಅಯೋಧ್ಯೆಯಲ್ಲೇ ಪ್ರತ್ಯೇಕವಾಗಿ ನೀಡಲಾಗಿದೆ.

ಅಯೋಧ್ಯೆಯಲ್ಲಿ ದಿವ್ಯ-ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಟಿವಿ 9 ಪ್ರಮೋಟರ್ಸ್​ ದೇಣಿಗೆ, 11 ಕೋಟಿ ರೂ ಚೆಕ್​ ಕಾಣಿಕೆ

Published On - 8:19 pm, Tue, 26 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us