AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು
ರೈತನ ಮೃತದೇಹ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 26, 2021 | 7:43 PM

Share

ದೆಹಲಿ: ಸೆಂಟ್ರಲ್ ದೆಹಲಿಯ ಐಟಿಒ ಪ್ರದೇಶದಲ್ಲಿ ರೈತರ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಉರುಳಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಮೃತ ರೈತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಾಜಿಪುರ್ ಗಡಿಭಾಗದಿಂದ ರೈತರು ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಮಧ್ಯೆ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ಬಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಟ್ರ್ಯಾಕ್ಟರ್ ಬ್ಯಾರಿಕೇಡ್​ಗೆ ಗುದ್ದಿ   ಟ್ರ್ಯಾಕ್ಟರ್ ಉರುಳಿದಾಗ  ಚಲಾಯಿಸುತ್ತಿದ್ದ ವ್ಯಕ್ತಿ ಅದರ ಚಕ್ರದೆಡೆಗೆ ಸಿಲುಕಿ ಸಾವಿಗೀಡಾಗಿದ್ದಾರೆ ಎಂದಿದ್ದಾರೆ ಪೊಲೀಸರು.

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ