AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 3:23 PM

Share

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ ತೀವ್ರಸ್ವರೂಪ ಪಡೆದುಕೊಂಡಿದೆ. ಗಣರಾಜ್ಯೋತ್ಸವ ದಿನವಾದ ಇಂದು ರೈತರು ದೆಹಲಿ ಕೆಂಪುಕೋಟೆ ಆವರಣ ಪ್ರವೇಶಿಸಿ, ರೈತಧ್ವಜವನ್ನು ಹಾರಿಸಿದ್ದಾರೆ. ಸದ್ಯ, ಧ್ವಜಾರೋಹಣ ಸ್ಥಳದಿಂದ ರೈತರನ್ನು ಪೊಲೀಸರು ಕೆಳಗಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದರು. ನೂತನ ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದರು. ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದರು. ನಂತರ ಪೊಲೀಸರು ಅವರನ್ನು ಕೆಳಗೆ ಇಳಿಸಿದ್ದಾರೆ.

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ. ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ ಎಂದು ವರದಿ ಆಗಿದೆ.

‘ನಮ್ಮ ಕೆಲಸ ಮುಗಿಯಿತು, ಕೆಂಪುಕೋಟೆಯಿಂದ ವಾಪಸ್ ಹೋಗ್ತೀವಿ’

‘ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗ್ತೀವಿ’ ಎಂದು ರೈತ ನಾಯಕರು ಕೆಲ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದೆಹಲಿ ಪೊಲೀಸ್ ಅಧಿಕಾರಿಗಳು ಸಹ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ನಗರದಿಂದ ವಾಪಸ್ ಹೋಗುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯನ್ನು ರೈತರು ಒಪ್ಪಿಕೊಂಡಿದ್ದು, ಈ ಮೊದಲು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಗಳಿಗೆ ಹಿಂದಿರುಗುವ ನಿರ್ಧಾರ ಶೀಘ್ರ ಹೊರಬೀಳುವ ನಿರೀಕ್ಷೆಯಿದೆ’ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ