AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 3:23 PM

Share

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ ತೀವ್ರಸ್ವರೂಪ ಪಡೆದುಕೊಂಡಿದೆ. ಗಣರಾಜ್ಯೋತ್ಸವ ದಿನವಾದ ಇಂದು ರೈತರು ದೆಹಲಿ ಕೆಂಪುಕೋಟೆ ಆವರಣ ಪ್ರವೇಶಿಸಿ, ರೈತಧ್ವಜವನ್ನು ಹಾರಿಸಿದ್ದಾರೆ. ಸದ್ಯ, ಧ್ವಜಾರೋಹಣ ಸ್ಥಳದಿಂದ ರೈತರನ್ನು ಪೊಲೀಸರು ಕೆಳಗಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದರು. ನೂತನ ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದರು. ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದರು. ನಂತರ ಪೊಲೀಸರು ಅವರನ್ನು ಕೆಳಗೆ ಇಳಿಸಿದ್ದಾರೆ.

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ. ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ ಎಂದು ವರದಿ ಆಗಿದೆ.

‘ನಮ್ಮ ಕೆಲಸ ಮುಗಿಯಿತು, ಕೆಂಪುಕೋಟೆಯಿಂದ ವಾಪಸ್ ಹೋಗ್ತೀವಿ’

‘ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗ್ತೀವಿ’ ಎಂದು ರೈತ ನಾಯಕರು ಕೆಲ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದೆಹಲಿ ಪೊಲೀಸ್ ಅಧಿಕಾರಿಗಳು ಸಹ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ನಗರದಿಂದ ವಾಪಸ್ ಹೋಗುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯನ್ನು ರೈತರು ಒಪ್ಪಿಕೊಂಡಿದ್ದು, ಈ ಮೊದಲು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಗಳಿಗೆ ಹಿಂದಿರುಗುವ ನಿರ್ಧಾರ ಶೀಘ್ರ ಹೊರಬೀಳುವ ನಿರೀಕ್ಷೆಯಿದೆ’ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ