AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 3:23 PM

Share

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ ತೀವ್ರಸ್ವರೂಪ ಪಡೆದುಕೊಂಡಿದೆ. ಗಣರಾಜ್ಯೋತ್ಸವ ದಿನವಾದ ಇಂದು ರೈತರು ದೆಹಲಿ ಕೆಂಪುಕೋಟೆ ಆವರಣ ಪ್ರವೇಶಿಸಿ, ರೈತಧ್ವಜವನ್ನು ಹಾರಿಸಿದ್ದಾರೆ. ಸದ್ಯ, ಧ್ವಜಾರೋಹಣ ಸ್ಥಳದಿಂದ ರೈತರನ್ನು ಪೊಲೀಸರು ಕೆಳಗಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದರು. ನೂತನ ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದರು. ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದರು. ನಂತರ ಪೊಲೀಸರು ಅವರನ್ನು ಕೆಳಗೆ ಇಳಿಸಿದ್ದಾರೆ.

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ. ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ ಎಂದು ವರದಿ ಆಗಿದೆ.

‘ನಮ್ಮ ಕೆಲಸ ಮುಗಿಯಿತು, ಕೆಂಪುಕೋಟೆಯಿಂದ ವಾಪಸ್ ಹೋಗ್ತೀವಿ’

‘ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗ್ತೀವಿ’ ಎಂದು ರೈತ ನಾಯಕರು ಕೆಲ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದೆಹಲಿ ಪೊಲೀಸ್ ಅಧಿಕಾರಿಗಳು ಸಹ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ನಗರದಿಂದ ವಾಪಸ್ ಹೋಗುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯನ್ನು ರೈತರು ಒಪ್ಪಿಕೊಂಡಿದ್ದು, ಈ ಮೊದಲು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಗಳಿಗೆ ಹಿಂದಿರುಗುವ ನಿರ್ಧಾರ ಶೀಘ್ರ ಹೊರಬೀಳುವ ನಿರೀಕ್ಷೆಯಿದೆ’ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ