AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು
ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ ರೈತರು
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 26, 2021 | 3:23 PM

Share

ದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ ತೀವ್ರಸ್ವರೂಪ ಪಡೆದುಕೊಂಡಿದೆ. ಗಣರಾಜ್ಯೋತ್ಸವ ದಿನವಾದ ಇಂದು ರೈತರು ದೆಹಲಿ ಕೆಂಪುಕೋಟೆ ಆವರಣ ಪ್ರವೇಶಿಸಿ, ರೈತಧ್ವಜವನ್ನು ಹಾರಿಸಿದ್ದಾರೆ. ಸದ್ಯ, ಧ್ವಜಾರೋಹಣ ಸ್ಥಳದಿಂದ ರೈತರನ್ನು ಪೊಲೀಸರು ಕೆಳಗಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾ ನಿರತ ರೈತರು ಕೆಂಪುಕೋಟೆಗೆ ನುಗ್ಗಿದ್ದರು. ನೂತನ ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ಸಾವಿರಾರು ರೈತರು ಧ್ವಜಾರೋಹಣ ಸ್ಥಳಕ್ಕೆ ಪ್ರವೇಶಿಸಿದ್ದರು. ಧ್ವಜಸ್ತಂಭ ಏರಿ ಎರಡು ಬಾವುಟಗಳನ್ನು ಹಾರಿಸಿದ್ದರು. ನಂತರ ಪೊಲೀಸರು ಅವರನ್ನು ಕೆಳಗೆ ಇಳಿಸಿದ್ದಾರೆ.

ಕೆಂಪುಕೋಟೆಯ ಮೇಲೆ ಇನ್ನೂ ಹಲವು ರೈತರು ಇದ್ದಾರೆ. ರಾಷ್ಟ್ರಧ್ವಜ, ಕಿಸಾನ್ ಧ್ವಜ ಹಿಡಿದು ರೈತರಿಂದ ಘೋಷಣೆ ಕೂಗಲಾಗುತ್ತಿದೆ. ಕೆಂಪುಕೋಟೆಯಿಂದ ರೈತರನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ. ರೈತರು, ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ ಎಂದು ವರದಿ ಆಗಿದೆ.

‘ನಮ್ಮ ಕೆಲಸ ಮುಗಿಯಿತು, ಕೆಂಪುಕೋಟೆಯಿಂದ ವಾಪಸ್ ಹೋಗ್ತೀವಿ’

‘ದೆಹಲಿ ಕೆಂಪುಕೋಟೆಯ ಮೇಲೆ ರೈತಧ್ವಜ ಹಾರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶವೊಂದನ್ನು ರವಾನಿಸುವ ತುಡಿತವಿತ್ತು. ಇದೀಗ ಅದು ಈಡೇರಿದೆ. ನಾವು ವಾಪಸ್​ ಮೊದಲಿದ್ದ ಸ್ಥಳಕ್ಕೆ ಹೋಗ್ತೀವಿ’ ಎಂದು ರೈತ ನಾಯಕರು ಕೆಲ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದೆಹಲಿ ಪೊಲೀಸ್ ಅಧಿಕಾರಿಗಳು ಸಹ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ನಗರದಿಂದ ವಾಪಸ್ ಹೋಗುವಂತೆ ಸೂಚಿಸಿದ್ದಾರೆ. ಅಧಿಕಾರಿಗಳ ಸೂಚನೆಯನ್ನು ರೈತರು ಒಪ್ಪಿಕೊಂಡಿದ್ದು, ಈ ಮೊದಲು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಗಳಿಗೆ ಹಿಂದಿರುಗುವ ನಿರ್ಧಾರ ಶೀಘ್ರ ಹೊರಬೀಳುವ ನಿರೀಕ್ಷೆಯಿದೆ’ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್