AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆ ಭಾಗದಲ್ಲಿ ಕಳೆದ ವರ್ಷ ಜೂನ್ 15ರಂದು, ಭಾರತ ಹಾಗೂ ಚೀನಾ ದೇಶದ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:41 PM

Share

ದೆಹಲಿ: ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೇನೆಯೊಂದಿಗೆ ನಡೆದಿದ್ದ ಸಂಘರ್ಷದ ಬಗ್ಗೆ ರಕ್ಷಣಾ ಇಲಾಖೆ ಇದೇ ಮೊದಲ ಬಾರಿಗೆ ಮಹತ್ವದ ವಿವರಗಳನ್ನು ಬಹಿರಂಗಪಡಿಸಿದೆ. ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮರಾಗಿದ್ದ ಬಿಹಾರ್ ರೆಜಿಮೆಂಟ್​ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂತೋಷ್ ಬಾಬು ಅವರಿಗೆ ಮಹಾವೀರ ಚಕ್ರ ಪುರಸ್ಕಾರದ ಗೌರವ ಘೋಷಣೆಯಾಗಿದೆ. ಈ ಘೋಷಣೆಯ ಜೊತೆಗೆ ನೀಡಿದ್ದ ಮಾಹಿತಿಯಲ್ಲಿ 2020ರ ಜೂನ್ 15ರ ರಾತ್ರಿ ಗಡಿಯಲ್ಲಿ ಏನೆಲ್ಲಾ ನಡೆದಿತ್ತು ಎಂಬ ವಿವರಗಳೂ ಬಹಿರಂಗವಾಗಿವೆ.

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಪಾಂಗಾಂಗ್ ಸರೋವರದ ಸಮೀಪ 2020ರ ಜೂನ್ 15ರಂದು, ಭಾರತ ಹಾಗೂ ಚೀನಾ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು. ಭಾರತೀಯ ಸೇನೆಯ ಬಿಹಾರ-16 ಬೆಟಾಲಿಯನ್​ನ ಕಮಾಂಡಿಂಗ್ ಅಧಿಕಾರಿ ಕರ್ನಲ್ ಸಂತೋಷ್ ಬಾಬು ವೇಳೆ ಹುತಾತ್ಮರಾಗಿದ್ದರು.

72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ, ನಿನ್ನೆ (ಜ.25) ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಗೌರವ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್ ಘೋಷಣೆ ಮಾಡಿದ್ದರು. ಈ ವೇಳೆ, ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ನಡುವೆ ನಡೆದ ಸಂಘರ್ಷದ ಬಗ್ಗೆ, ಭಾರತೀಯ ಸರ್ಕಾರದ ರಕ್ಷಣಾ ಸಚಿವಾಲಯ ವಿಸ್ತೃತ ವರದಿ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರಿಗೆ ಗಾಲ್ವಾನ್ ಕಣಿವೆಯಲ್ಲಿ ‘ಆಪರೇಷನ್ ಸ್ನೋ ಲೆಪಾರ್ಡ್’ ಮುನ್ನಡೆಸುವ ಹೊಣೆ ವಹಿಸಲಾಗಿತ್ತು. ಕರ್ನಲ್ ಬಾಬು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು. ಆದರೆ, ಚೀನಾ ಸೈನಿಕರು ಶಸ್ತ್ರಾಸ್ತ್ರಗಳೊಂದಿಗೆ ಮಾರಕ ದಾಳಿ ಮಾಡಿದರು. ಕಲ್ಲೆಸೆತದ ಸಂಘರ್ಷಕ್ಕೂ ಮುಂದಾದರು. ದಾಳಿಗೆ ಕುಗ್ಗದ ಭಾರತೀಯ ಸೇನೆ ಈ ದಾಳಿಯನ್ನು ಸಮರ್ಥವಾಗಿ ಎದುರಿಸಿತು. ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವ ಶತಪ್ರಯತ್ನ ಮಾಡಿತು ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರ ವೀರ ಹೋರಾಟವನ್ನು ಸ್ಮರಿಸಿಕೊಂಡಿರುವ ರಕ್ಷಣಾ ಸಚಿವಾಲಯ, ಸಂತೋಷ್ ಬಾಬು ಅವರು ವಿರೋಧಿ ಸೇನೆಯ ಹುಟ್ಟಡಗಿಸಲು ತಮ್ಮ ಕೊನೆಯ ಉಸಿರಿರುವರೆಗೂ ಹೋರಾಡಿದರು. ಗಾಯ, ನೋವು ಸಹಿಸಿಕೊಂಡು, ಸೇನಾ ತುಕಡಿಯನ್ನು ಮುನ್ನಡೆಸಿದರು ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಆ ಮೂಲಕ, ಗಾಲ್ವಾನ್ ಕಣಿವೆ ಹೋರಾಟದ ಬಗ್ಗೆ ವಿಸ್ತೃತ ವರದಿಯನ್ನು ಮೊದಲ ಬಾರಿಗೆ ಕೇಂದ್ರ ಸರ್ಕಾರ ಬಹಿರಂಗ ಪಡಿಸಿದಂತೆ ಆಗಿದೆ.

Published On - 12:00 pm, Tue, 26 January 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!