AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆ ಭಾಗದಲ್ಲಿ ಕಳೆದ ವರ್ಷ ಜೂನ್ 15ರಂದು, ಭಾರತ ಹಾಗೂ ಚೀನಾ ದೇಶದ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 8:41 PM

Share

ದೆಹಲಿ: ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೇನೆಯೊಂದಿಗೆ ನಡೆದಿದ್ದ ಸಂಘರ್ಷದ ಬಗ್ಗೆ ರಕ್ಷಣಾ ಇಲಾಖೆ ಇದೇ ಮೊದಲ ಬಾರಿಗೆ ಮಹತ್ವದ ವಿವರಗಳನ್ನು ಬಹಿರಂಗಪಡಿಸಿದೆ. ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮರಾಗಿದ್ದ ಬಿಹಾರ್ ರೆಜಿಮೆಂಟ್​ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂತೋಷ್ ಬಾಬು ಅವರಿಗೆ ಮಹಾವೀರ ಚಕ್ರ ಪುರಸ್ಕಾರದ ಗೌರವ ಘೋಷಣೆಯಾಗಿದೆ. ಈ ಘೋಷಣೆಯ ಜೊತೆಗೆ ನೀಡಿದ್ದ ಮಾಹಿತಿಯಲ್ಲಿ 2020ರ ಜೂನ್ 15ರ ರಾತ್ರಿ ಗಡಿಯಲ್ಲಿ ಏನೆಲ್ಲಾ ನಡೆದಿತ್ತು ಎಂಬ ವಿವರಗಳೂ ಬಹಿರಂಗವಾಗಿವೆ.

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಪಾಂಗಾಂಗ್ ಸರೋವರದ ಸಮೀಪ 2020ರ ಜೂನ್ 15ರಂದು, ಭಾರತ ಹಾಗೂ ಚೀನಾ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು. ಭಾರತೀಯ ಸೇನೆಯ ಬಿಹಾರ-16 ಬೆಟಾಲಿಯನ್​ನ ಕಮಾಂಡಿಂಗ್ ಅಧಿಕಾರಿ ಕರ್ನಲ್ ಸಂತೋಷ್ ಬಾಬು ವೇಳೆ ಹುತಾತ್ಮರಾಗಿದ್ದರು.

72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ, ನಿನ್ನೆ (ಜ.25) ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಗೌರವ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್ ಘೋಷಣೆ ಮಾಡಿದ್ದರು. ಈ ವೇಳೆ, ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ನಡುವೆ ನಡೆದ ಸಂಘರ್ಷದ ಬಗ್ಗೆ, ಭಾರತೀಯ ಸರ್ಕಾರದ ರಕ್ಷಣಾ ಸಚಿವಾಲಯ ವಿಸ್ತೃತ ವರದಿ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರಿಗೆ ಗಾಲ್ವಾನ್ ಕಣಿವೆಯಲ್ಲಿ ‘ಆಪರೇಷನ್ ಸ್ನೋ ಲೆಪಾರ್ಡ್’ ಮುನ್ನಡೆಸುವ ಹೊಣೆ ವಹಿಸಲಾಗಿತ್ತು. ಕರ್ನಲ್ ಬಾಬು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು. ಆದರೆ, ಚೀನಾ ಸೈನಿಕರು ಶಸ್ತ್ರಾಸ್ತ್ರಗಳೊಂದಿಗೆ ಮಾರಕ ದಾಳಿ ಮಾಡಿದರು. ಕಲ್ಲೆಸೆತದ ಸಂಘರ್ಷಕ್ಕೂ ಮುಂದಾದರು. ದಾಳಿಗೆ ಕುಗ್ಗದ ಭಾರತೀಯ ಸೇನೆ ಈ ದಾಳಿಯನ್ನು ಸಮರ್ಥವಾಗಿ ಎದುರಿಸಿತು. ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವ ಶತಪ್ರಯತ್ನ ಮಾಡಿತು ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರ ವೀರ ಹೋರಾಟವನ್ನು ಸ್ಮರಿಸಿಕೊಂಡಿರುವ ರಕ್ಷಣಾ ಸಚಿವಾಲಯ, ಸಂತೋಷ್ ಬಾಬು ಅವರು ವಿರೋಧಿ ಸೇನೆಯ ಹುಟ್ಟಡಗಿಸಲು ತಮ್ಮ ಕೊನೆಯ ಉಸಿರಿರುವರೆಗೂ ಹೋರಾಡಿದರು. ಗಾಯ, ನೋವು ಸಹಿಸಿಕೊಂಡು, ಸೇನಾ ತುಕಡಿಯನ್ನು ಮುನ್ನಡೆಸಿದರು ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಆ ಮೂಲಕ, ಗಾಲ್ವಾನ್ ಕಣಿವೆ ಹೋರಾಟದ ಬಗ್ಗೆ ವಿಸ್ತೃತ ವರದಿಯನ್ನು ಮೊದಲ ಬಾರಿಗೆ ಕೇಂದ್ರ ಸರ್ಕಾರ ಬಹಿರಂಗ ಪಡಿಸಿದಂತೆ ಆಗಿದೆ.

Published On - 12:00 pm, Tue, 26 January 21

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ