AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆ ಭಾಗದಲ್ಲಿ ಕಳೆದ ವರ್ಷ ಜೂನ್ 15ರಂದು, ಭಾರತ ಹಾಗೂ ಚೀನಾ ದೇಶದ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು.

ಆಪರೇಷನ್ ಸ್ನೋ ಲೆಪಾರ್ಡ್; ಗಾಲ್ವಾನ್ ಕಣಿವೆ ಸಂಘರ್ಷದ ವಿವರ ಮೊದಲ ಬಾರಿಗೆ ಬಹಿರಂಗ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 8:41 PM

ದೆಹಲಿ: ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೇನೆಯೊಂದಿಗೆ ನಡೆದಿದ್ದ ಸಂಘರ್ಷದ ಬಗ್ಗೆ ರಕ್ಷಣಾ ಇಲಾಖೆ ಇದೇ ಮೊದಲ ಬಾರಿಗೆ ಮಹತ್ವದ ವಿವರಗಳನ್ನು ಬಹಿರಂಗಪಡಿಸಿದೆ. ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮರಾಗಿದ್ದ ಬಿಹಾರ್ ರೆಜಿಮೆಂಟ್​ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂತೋಷ್ ಬಾಬು ಅವರಿಗೆ ಮಹಾವೀರ ಚಕ್ರ ಪುರಸ್ಕಾರದ ಗೌರವ ಘೋಷಣೆಯಾಗಿದೆ. ಈ ಘೋಷಣೆಯ ಜೊತೆಗೆ ನೀಡಿದ್ದ ಮಾಹಿತಿಯಲ್ಲಿ 2020ರ ಜೂನ್ 15ರ ರಾತ್ರಿ ಗಡಿಯಲ್ಲಿ ಏನೆಲ್ಲಾ ನಡೆದಿತ್ತು ಎಂಬ ವಿವರಗಳೂ ಬಹಿರಂಗವಾಗಿವೆ.

ಪೂರ್ವ ಲಡಾಖ್​ನ ಗಾಲ್ವಾನ್ ಕಣಿವೆಯ ಪಾಂಗಾಂಗ್ ಸರೋವರದ ಸಮೀಪ 2020ರ ಜೂನ್ 15ರಂದು, ಭಾರತ ಹಾಗೂ ಚೀನಾ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರಲ್ಲಿ ಭಾರತದ 20 ಯೋಧರು ವೀರಮರಣವನ್ನಪ್ಪಿದ್ದರು. ಭಾರತೀಯ ಸೇನೆಯ ಬಿಹಾರ-16 ಬೆಟಾಲಿಯನ್​ನ ಕಮಾಂಡಿಂಗ್ ಅಧಿಕಾರಿ ಕರ್ನಲ್ ಸಂತೋಷ್ ಬಾಬು ವೇಳೆ ಹುತಾತ್ಮರಾಗಿದ್ದರು.

72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ, ನಿನ್ನೆ (ಜ.25) ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಗೌರವ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್ ಘೋಷಣೆ ಮಾಡಿದ್ದರು. ಈ ವೇಳೆ, ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ನಡುವೆ ನಡೆದ ಸಂಘರ್ಷದ ಬಗ್ಗೆ, ಭಾರತೀಯ ಸರ್ಕಾರದ ರಕ್ಷಣಾ ಸಚಿವಾಲಯ ವಿಸ್ತೃತ ವರದಿ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರಿಗೆ ಗಾಲ್ವಾನ್ ಕಣಿವೆಯಲ್ಲಿ ‘ಆಪರೇಷನ್ ಸ್ನೋ ಲೆಪಾರ್ಡ್’ ಮುನ್ನಡೆಸುವ ಹೊಣೆ ವಹಿಸಲಾಗಿತ್ತು. ಕರ್ನಲ್ ಬಾಬು ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು. ಆದರೆ, ಚೀನಾ ಸೈನಿಕರು ಶಸ್ತ್ರಾಸ್ತ್ರಗಳೊಂದಿಗೆ ಮಾರಕ ದಾಳಿ ಮಾಡಿದರು. ಕಲ್ಲೆಸೆತದ ಸಂಘರ್ಷಕ್ಕೂ ಮುಂದಾದರು. ದಾಳಿಗೆ ಕುಗ್ಗದ ಭಾರತೀಯ ಸೇನೆ ಈ ದಾಳಿಯನ್ನು ಸಮರ್ಥವಾಗಿ ಎದುರಿಸಿತು. ಚೀನಾ ಸೈನಿಕರನ್ನು ಹಿಮ್ಮೆಟ್ಟಿಸುವ ಶತಪ್ರಯತ್ನ ಮಾಡಿತು ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.

ಕರ್ನಲ್ ಸಂತೋಷ್ ಬಾಬು ಅವರ ವೀರ ಹೋರಾಟವನ್ನು ಸ್ಮರಿಸಿಕೊಂಡಿರುವ ರಕ್ಷಣಾ ಸಚಿವಾಲಯ, ಸಂತೋಷ್ ಬಾಬು ಅವರು ವಿರೋಧಿ ಸೇನೆಯ ಹುಟ್ಟಡಗಿಸಲು ತಮ್ಮ ಕೊನೆಯ ಉಸಿರಿರುವರೆಗೂ ಹೋರಾಡಿದರು. ಗಾಯ, ನೋವು ಸಹಿಸಿಕೊಂಡು, ಸೇನಾ ತುಕಡಿಯನ್ನು ಮುನ್ನಡೆಸಿದರು ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಆ ಮೂಲಕ, ಗಾಲ್ವಾನ್ ಕಣಿವೆ ಹೋರಾಟದ ಬಗ್ಗೆ ವಿಸ್ತೃತ ವರದಿಯನ್ನು ಮೊದಲ ಬಾರಿಗೆ ಕೇಂದ್ರ ಸರ್ಕಾರ ಬಹಿರಂಗ ಪಡಿಸಿದಂತೆ ಆಗಿದೆ.

Published On - 12:00 pm, Tue, 26 January 21

ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ